ಬೆಂಗಳೂರು : ಎಸ್ಸಿಎಸ್ಪಿ/ಟಿಎಸ್ಪಿ ಅನುದಾನವನ್ನು ಪಂಚ ಗ್ಯಾರಂಟಿಗಾಗಿ ಬಳಸುವ ಮೂಲಕ ಪರಿಶಿಷ್ಟರ ಹಣವನ್ನ ದೋಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ 11.8 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿದೆ. ಈ ಮೂಲಕ ಕಾಂಗ್ರೆಸ್ನವರು ಮತ್ತೊಮ್ಮೆ ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆಯಲು ಹೊರಟಿದ್ದಾರೆ. ಇದು ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯನವರೇ, ಅನುದಾನ ಹಂಚಿಕೆ ಮಾಡಲು ಹಣವಿಲ್ಲದ ಮೇಲೆ ಬಜೆಟ್ನಲ್ಲಿ ಸುಮ್ಮನೆ ಕಾಟಾಚಾರಕ್ಕೆ ಘೋಷಣೆ ಮಾಡುತ್ತೀರಾ? ಬಜೆಟ್ನಲ್ಲಿ ಅವಾಸ್ತವಿಕ ಘೋಷಣೆಗಳನ್ನು ಮಾಡಿ, ಪರಿಶಿಷ್ಟರ ಮೂಗಿಗೆ ತುಪ್ಪ ಸವರಿದ್ದೀರಿ. ಈ ಮೂಲಕ ಬಿಟ್ಟಿ ಪ್ರಚಾರ ಪಡೆದುಕೊಂಡರೆ ಪರಿಶಿಷ್ಟ ಸಮುದಾಯಗಳ ಕಲ್ಯಾಣ ಆಗುತ್ತಾ? ಇದೇನಾ ತಮಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಇರುವ ಬದ್ಧತೆ? ಇದೇನಾ ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ಕಡೆ ಬಿಡುಗಡೆ ಮಾಡಿರುವ ಅಲ್ಪ ಸ್ವಲ್ಪ ಅನುದಾನವನ್ನು ಭ್ರಷ್ಟಾಚಾರಕ್ಕೆ ಮತ್ತೊಂದು ಕಡೆ ಘೋಷಣೆ ಮಾಡಿದ ಅನುದಾನವನ್ನ ಹಂಚಿಕೆ ಮಾಡದೆ ಬಾಕಿ ಉಳಿಸಿಕೊಳ್ಳುತ್ತೀರಿ. ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಎನ್ನುವುದು ಇದ್ದರೆ ಇನ್ನೆಂದೂ ಅಹಿಂದ ಹೆಸರಿನಲ್ಲಿ ರಾಜಕೀಯ ಮಾಡಬೇಡಿ ಎಂದು ಪೋಸ್ಟ್ ಮಾಡಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…