ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪ್ರಮಾಣವನ್ನು 40 ಯುನಿಟ್ ನಿಂದ 75 ಯುನಿಟ್ ಗೆ ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರಕಾರ ತೆಗೆದುಕೊಂಡಿದೆ.
ಇದರಿಂದ ಇಂಧನ ಇಲಾಖೆಗೆ ವಾರ್ಷಿಕ 979 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದ್ದು, ಇದೇ ತಿಂಗಳಿಂದ ಯೋಜನೆಯ ಲಾಭ ಫಲಾನುಭವಿಗಳಿಗೆ ಲಭ್ಯವಾಗಲಿದೆ.
ಇದಕ್ಕೆ ಸಂಬಂಧಪಟ್ಟ ಕಡತ ಈಗಾಗಲೇ ಹಣಕಾಸು ಇಲಾಖೆಗೆ ರವಾನೆಯಾಗಿದ್ದು, ಇನ್ನೆರಡು ದಿನದಲ್ಲಿ ಅಧಿಕೃತ ಆದೇಶ ಪ್ರಕಟವಾಗಲಿದೆ. ಆದರೆ ಇದಕ್ಕೆ ಸಂಬಂಧಪಟ್ಟ ಎಲ್ಲ ಪ್ರಕ್ರಿಯೆಗಳನ್ನು ಇಂಧನ ಇಲಾಖೆ ಪೂರ್ಣಗೊಳಿಸಿದ್ದು, ಭಾಗ್ಯಜ್ಯೋತಿ ಹಾಗೂ ಕುಟೀರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವವರೂ ಸೇರಿದಂತೆ ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳ ಮನೆಯಲ್ಲಿ ಇನ್ನು ಮುಂದೆ ವಿದ್ಯುತ್ ನಿರಂತರವಾಗಲಿದೆ.
ಮಾಜಿ ಉಪ ಪ್ರಧಾನಿ ದಿ. ಬಾಬು ಜಗಜೀವನ್ ರಾಮ್ ಅವರ 115 ನೇ ಜಯಂತಿ ಸಮಾರಂಭದಲ್ಲಿ ಗ್ರಾಮೀಣ ಪ್ರದೇಶದ ಭಾಗ್ಯ ಜ್ಯೋತಿ ಹಾಗೂ ಕುಟೀರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಕುಟುಂಬಗಳಿಗೆ ಹಾಲಿ ಉಚಿತವಾಗಿ ನೀಡುತ್ತಿದ್ದ 40 ಯುನಿಟ್ ವಿದ್ಯುತ್ ಅನ್ನು 75 ಯುನಿಟ್ ಹೆಚ್ಚಿಸಲಾಗುವುದು ಎಂದು ಏಪ್ರೀಲ್ 5 ರಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಇಂಧನ ಇಲಾಖೆಗೆ ಕಡತ ರವಾನೆಯಾಗಿತ್ತು.
ರಾಜ್ಯದಲ್ಲಿ 75 ಯುನಿಟ್ ಒಳಗೆ ವಿದ್ಯುತ್ ಬಳಸುವ ಗೃಹ ಬಳಕೆದಾರರ ಸಂಖ್ಯೆ 1,46,65,910 ರಷ್ಟು ಇದೆ. ಈ ಪೈಕಿ ಭಾಗ್ಯ ಜ್ಯೋತಿ ಹಾಗೂ ಕುಟಿರ ಜ್ಯೋತಿ ವ್ಯಾಪ್ತಿಗೆ ಬರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಳಕೆದಾರರ ಸಂಖ್ಯೆ 39,26,065 ರಷ್ಟು ಇದೆ. ಈ ಗ್ರಾಹಕರು ವಾರ್ಷಿಕ 1,356,92 ಮಿಲಿಯನ್ ಯುನಿಟ್ ಬಳಕೆ ಮಾಡುತ್ತಾರೆ. ಒಟ್ಟಾರೆಯಾಗಿ ಈ ಯೋಜನೆಯ ಫಲಾನುಭವಿಗಳನ್ನೂ ಒಳಗೊಂಡಂತೆ ಪರಿಶಿಷ್ಟ ಜಾತಿಯ ಗ್ರಾಹಕರಿಗೆ 694.15 ಕೋಟಿ ರೂ, ಪರಿಶಿಷ್ಟ ಪಂಗಡದ ಗ್ರಾಹಕರಿಗೆ 285.42 ಕೋಟಿ ರೂ. ಸೇರಿದಂತೆ 979 ಕೋಟಿ ರೂ.ನ್ನು ಸಬ್ಸಿಡಿ ರೂಪದಲ್ಲಿ ಇಂಧನ ಇಲಾಖೆ ನೀಡಲಿದೆ.
ಈ ಹಿನ್ನೆಲೆಯಲ್ಲಿ ಇಂಧನ ಇಲಾಖೆ ನಿಯಮಾವಳಿ ರೂಪಿಸಿ ಆರ್ಥಿಕ ಇಲಾಖೆಗೆ ಕಳುಹಿಸಿಕೊಟ್ಟಿದೆ. ಈ ಸಬ್ಸಿಡಿ ಯೋಜನೆಗೆ 979 ಕೋಟಿ ರೂ. ಹೆಚ್ಚುವರಿ ಸಹಾಯಧನ ಅಗತ್ಯವಾಗಿದ್ದು, 75 ಯುನಿಟ್ ವರೆಗೆ ಮಾತ್ರ ಉಚಿತ ವಿದ್ಯುತ್ ನೀಡಲಾಗುತ್ತದೆ. ಈ ವ್ಯವಸ್ಥೆ ಮೇ 1 ರಿಂದಲೇ ಜಾರಿಗೆ ಬರಲಿದೆ. ಈ ಪ್ರವರ್ಗದ ಗ್ರಾಹಕರಿಗೆ ಮಾಪಕ ವ್ಯವಸ್ಥೆ ಕಡ್ಡಾಯವಾಗಿರಲಿದೆ.
ಯೋಜನೆ ವ್ಯಾಪ್ತಿಗೆ ಬರಲು ಇಲಾಖೆ ನಿಯಮಗಳನ್ನು ರೂಪಿಸಿದ್ದು, ಏಪ್ರಿಲ್ ಅಂತ್ಯದೊಳಗಾಗಿ ಬಾಕಿ ವಿದ್ಯುತ್ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಿರಬೇಕಾಗುತ್ತದೆ. ನೇರ ನಗದು ವರ್ಗಾವಣೆ ಮೂಲಕ ಸಹಾಯಧನ ನೀಡುವುದರಿಂದ ಗ್ರಾಹಕರು ತಮ್ಮ ಬ್ಯಾಂಕ್ ಪಾಸ್ ಬುಕ್ ಅನ್ನು ದಾಖಲೆಯ ಜತೆಗೆ ಅಡಕಗೊಳಿಸಬೇಕಾಗುತ್ತದೆ.
ಖ್ಯಾತ ಖಳನಾಯಕ ಪ್ರದೀಪ್ ರಾವತ್ ನಿಧನ ಮುಂಬಯಿ: 'ಲಗಾನ್' ಮತ್ತು 'ಗಜನಿ' ಸೇರಿದಂತೆ ಹಲವು ಬ್ಲಾಕ್ಬಸ್ಟರ್ ಸಿನಿಮಾಗಳಲ್ಲಿ ಅಭಿನಯಿಸಿದ್ದ ಖ್ಯಾತ…
ಕಾರ್ಕಳ: ಹೋಟೆಲ್ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…
ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್ ಬೆಂಗಳೂರು: ಸಚಿವ ಸ್ಥಾನ ಸಿಗದ…
ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…
ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…