Featured

ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಗ್ರಾಹಕರಿಗೆ ಉಚಿತ ವಿದ್ಯುತ್: ಸುನೀಲ್ ಕುಮಾರ್ – Vishwanews24

ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಗ್ರಾಹಕರಿಗೆ ಉಚಿತ ವಿದ್ಯುತ್: ಸುನೀಲ್ ಕುಮಾರ್

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪ್ರಮಾಣವನ್ನು 40 ಯುನಿಟ್ ನಿಂದ 75 ಯುನಿಟ್ ಗೆ ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರಕಾರ ತೆಗೆದುಕೊಂಡಿದೆ.

ಇದರಿಂದ ಇಂಧನ ಇಲಾಖೆಗೆ ವಾರ್ಷಿಕ 979 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದ್ದು, ಇದೇ ತಿಂಗಳಿಂದ ಯೋಜನೆಯ ಲಾಭ ಫಲಾನುಭವಿಗಳಿಗೆ ಲಭ್ಯವಾಗಲಿದೆ.

ಇದಕ್ಕೆ ಸಂಬಂಧಪಟ್ಟ ಕಡತ ಈಗಾಗಲೇ ಹಣಕಾಸು ಇಲಾಖೆಗೆ ರವಾನೆಯಾಗಿದ್ದು, ಇನ್ನೆರಡು ದಿನದಲ್ಲಿ ಅಧಿಕೃತ ಆದೇಶ ಪ್ರಕಟವಾಗಲಿದೆ. ಆದರೆ ಇದಕ್ಕೆ ಸಂಬಂಧಪಟ್ಟ ಎಲ್ಲ ಪ್ರಕ್ರಿಯೆಗಳನ್ನು ಇಂಧನ ಇಲಾಖೆ ಪೂರ್ಣಗೊಳಿಸಿದ್ದು, ಭಾಗ್ಯಜ್ಯೋತಿ ಹಾಗೂ ಕುಟೀರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವವರೂ ಸೇರಿದಂತೆ ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳ ಮನೆಯಲ್ಲಿ ಇನ್ನು ಮುಂದೆ ವಿದ್ಯುತ್ ನಿರಂತರವಾಗಲಿದೆ.

ಮಾಜಿ ಉಪ ಪ್ರಧಾನಿ ದಿ. ಬಾಬು ಜಗಜೀವನ್ ರಾಮ್ ಅವರ 115 ನೇ ಜಯಂತಿ ಸಮಾರಂಭದಲ್ಲಿ ಗ್ರಾಮೀಣ ಪ್ರದೇಶದ ಭಾಗ್ಯ ಜ್ಯೋತಿ ಹಾಗೂ ಕುಟೀರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಕುಟುಂಬಗಳಿಗೆ ಹಾಲಿ ಉಚಿತವಾಗಿ ನೀಡುತ್ತಿದ್ದ 40 ಯುನಿಟ್ ವಿದ್ಯುತ್ ಅನ್ನು 75 ಯುನಿಟ್ ಹೆಚ್ಚಿಸಲಾಗುವುದು ಎಂದು ಏಪ್ರೀಲ್ 5 ರಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಇಂಧನ ಇಲಾಖೆಗೆ ಕಡತ ರವಾನೆಯಾಗಿತ್ತು.

ರಾಜ್ಯದಲ್ಲಿ 75 ಯುನಿಟ್ ಒಳಗೆ ವಿದ್ಯುತ್ ಬಳಸುವ ಗೃಹ ಬಳಕೆದಾರರ ಸಂಖ್ಯೆ 1,46,65,910 ರಷ್ಟು ಇದೆ. ಈ ಪೈಕಿ ಭಾಗ್ಯ ಜ್ಯೋತಿ ಹಾಗೂ ಕುಟಿರ ಜ್ಯೋತಿ ವ್ಯಾಪ್ತಿಗೆ ಬರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಳಕೆದಾರರ ಸಂಖ್ಯೆ 39,26,065 ರಷ್ಟು ಇದೆ. ಈ ಗ್ರಾಹಕರು ವಾರ್ಷಿಕ 1,356,92 ಮಿಲಿಯನ್ ಯುನಿಟ್ ಬಳಕೆ ಮಾಡುತ್ತಾರೆ. ಒಟ್ಟಾರೆಯಾಗಿ ಈ ಯೋಜನೆಯ ಫಲಾನುಭವಿಗಳನ್ನೂ ಒಳಗೊಂಡಂತೆ ಪರಿಶಿಷ್ಟ ಜಾತಿಯ ಗ್ರಾಹಕರಿಗೆ 694.15 ಕೋಟಿ ರೂ, ಪರಿಶಿಷ್ಟ ಪಂಗಡದ ಗ್ರಾಹಕರಿಗೆ 285.42 ಕೋಟಿ ರೂ. ಸೇರಿದಂತೆ 979 ಕೋಟಿ ರೂ.ನ್ನು ಸಬ್ಸಿಡಿ ರೂಪದಲ್ಲಿ ಇಂಧನ ಇಲಾಖೆ ನೀಡಲಿದೆ.

ಈ ಹಿನ್ನೆಲೆಯಲ್ಲಿ ಇಂಧನ ಇಲಾಖೆ ನಿಯಮಾವಳಿ ರೂಪಿಸಿ ಆರ್ಥಿಕ ಇಲಾಖೆಗೆ ಕಳುಹಿಸಿಕೊಟ್ಟಿದೆ. ಈ ಸಬ್ಸಿಡಿ ಯೋಜನೆಗೆ 979 ಕೋಟಿ ರೂ. ಹೆಚ್ಚುವರಿ ಸಹಾಯಧನ ಅಗತ್ಯವಾಗಿದ್ದು, 75 ಯುನಿಟ್ ವರೆಗೆ ಮಾತ್ರ ಉಚಿತ ವಿದ್ಯುತ್ ನೀಡಲಾಗುತ್ತದೆ. ಈ ವ್ಯವಸ್ಥೆ ಮೇ 1 ರಿಂದಲೇ ಜಾರಿಗೆ ಬರಲಿದೆ. ಈ ಪ್ರವರ್ಗದ ಗ್ರಾಹಕರಿಗೆ ಮಾಪಕ ವ್ಯವಸ್ಥೆ ಕಡ್ಡಾಯವಾಗಿರಲಿದೆ.

ಯೋಜನೆ ವ್ಯಾಪ್ತಿಗೆ ಬರಲು ಇಲಾಖೆ ನಿಯಮಗಳನ್ನು ರೂಪಿಸಿದ್ದು, ಏಪ್ರಿಲ್ ಅಂತ್ಯದೊಳಗಾಗಿ ಬಾಕಿ ವಿದ್ಯುತ್ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಿರಬೇಕಾಗುತ್ತದೆ. ನೇರ ನಗದು ವರ್ಗಾವಣೆ ಮೂಲಕ ಸಹಾಯಧನ ನೀಡುವುದರಿಂದ ಗ್ರಾಹಕರು ತಮ್ಮ ಬ್ಯಾಂಕ್ ಪಾಸ್ ಬುಕ್ ಅನ್ನು ದಾಖಲೆಯ ಜತೆಗೆ ಅಡಕಗೊಳಿಸಬೇಕಾಗುತ್ತದೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

21 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

21 hours ago