ಬೆಳಗಾವಿ: ಪರಿಶಿಷ್ಟ ಸಮುದಾಯದ ಭೂ ಒಡೆತನ ಯೋಜನೆಯಲ್ಲಿ ಅಕ್ರಮ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ.
ನಾರಾಯಣಸ್ವಾಮಿ ಅವರು ವಿಧಾನ ಪರಿಷತ್ನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಸ್ಸಿ-ಎಸ್ಟಿ ಸಮುದಾಯದ ಭೂ ಒಡೆತನ ಯೋಜನೆಯಡಿ 1991 ರಿಂದ 2021ರವರೆಗೆ ಒಟ್ಟು 55,920 ಎಕರೆ 49 ಸಾವಿರ ಫಲಾನುಭವಿಗಳಿಗೆ ಹಂಚಲಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಬಡವರ ಕೈಗೆ ಸಿಕ್ಕಿಲ್ಲ, ತಾರತಮ್ಯವಾಗುತ್ತಿದೆ ಎಂಬ ಆರೋಪವಿದ್ದು, ಎರಡು ತಿಂಗಳಿನಲ್ಲಿ ಸಭೆ ನಡೆಸಿ ಸಮೀಕ್ಷೆ ನಡೆಸಲು ಸೂಚಿಸಿದ್ದೇನೆ” ಎಂದರು.
ಇನ್ನು ಮಾಲೀಕರ ಕೈನಲ್ಲೇ ಭೂಮಿ ಇತ್ತು ಅಂತಹ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಇನ್ನು ಮುಂದೆ ಜಿಪಿಎಸ್ ಅಳವಡಿಸಿ ಸಮೀಕ್ಷೆ ನಡೆಸುತ್ತೇವೆ. ಅರ್ಜಿ ಸಲ್ಲಿಸಿದ ಎಲ್ಲರಿಗೂ ಭೂಮಿ ಹಂಚಲಾಗುವುದು” ಎಂದಿದ್ದಾರೆ.
197 ಜಾತಿಗಳಿರುವ ಸಂಸ್ಥೆಗೆ ಕೊಟ್ಟಿರುವ ಹಣ ಸಾಲುತ್ತಿಲ್ಲ. ಬಿಜೆಪಿ ಸರ್ಕಾರ ಅಕಾರಕ್ಕೆ ಬಂದ ನಂತರ ಹಿಂದುಳಿದ ಸಮುದಾಯಗಳಿಗೆ ಅನ್ಯಾಯವಾಗುತ್ತಿದ್ದು, ದುರ್ಬಲ ವರ್ಗಗಳ ಮೀಸಲಾತಿ ಜಾರಿಗೆ ಬಂದ ಮೇಲೆ ಹಿಂದುಳಿದ ವರ್ಗಗಳ ಮೀಸಲಾತಿಯಲ್ಲೂ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ನ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಕೋಟಾ, ದೇವರಾಜ್ ಅರಸು ಸಂಶೋಧನಾ ಸಂಸ್ಥೆ ಮುಚ್ಚಲು ಶಿಫಾರಸು ಮಾಡಿಲ್ಲ, ಅದನ್ನು ಮುಚ್ಚುವುದಿಲ್ಲ, ಮತ್ತಷ್ಟು ಪ್ರಬಲವಾಗಿ ಅಭಿವೃದ್ಧಿ ಮಾಡುತ್ತೇವೆ. ನನಗೆ ಎರಡು ಎಕರೆ ಭೂಮಿ ಇದ್ದರೆ ಅದು ದೇವರಾಜ ಅರಸ್ಸು ಅವರು ಜಾರಿಗೆ ತಂದ ಭೂ ಸುಧಾರಣಾ ಮಸೂದೆ ಕಾಯ್ದೆಯಿಂದ. ಈ ಅಂಶವನ್ನು ಗಮನದಲ್ಲಿ ಇಟ್ಟುಕೊಂಡು ದೇವರಾಜ ಅರಸು ಸಂಶೋಧನಾ ಅಭಿವೃದ್ಧಿ ನಿಗಮವನ್ನು ಮತ್ತಷ್ಟು ಬಲಗೊಳಿಸುತ್ತೇವೆ” ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…