Featured

ಪರಿಷತ್ ನಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪದಿಸಿದ ರಾಜ್ಯ ಸರ್ಕಾರ  – vishwanews24

ಪರಿಷತ್ ನಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪದಿಸಿದ ರಾಜ್ಯ ಸರ್ಕಾರ

ಗೊಂದಲಕ್ಕೀಡಾದ ಲೋಕಸೇವಾ ಆಯೋಗದ ಪರೀಕ್ಷಾ ವೇಳಾ ಪಟ್ಟಿಯನ್ನು ತಕ್ಷಣ ಬದಲಿಸುವಂತೆ ಆದೇಶ

ಗೊಂದಲಕ್ಕೀಡಾದ ಲೋಕಸೇವಾ ಆಯೋಗದ ಪರೀಕ್ಷಾ ವೇಳಾ ಪಟ್ಟಿಯನ್ನು ತಕ್ಷಣ ಬದಲಿಸುವಂತೆ ವಿಧಾನ ಪರಿಷತ್ ಅಧಿವೇಶನದಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಕೆಪಿಎಸ್ ಸಿ ಪರೀಕ್ಷಾ ದಿನಾಂಕವನ್ನು ಬದಲಿಸಿ ಶನಿವಾರ ಆದೇಶ ಹೊರಡಿಸಿದೆ.

ಕರ್ನಾಟಕ ಲೋಕಸೇವಾ ಆಯೋಗದಿಂದ ಹೊರಡಿಸಲಾಗಿದ್ದ ವಿವಿಧ ಲಾಖೆಗಳಲ್ಲಿನ NON HK ವೃಂದದ 227 ಗ್ರೂಪ್ ಬಿ.ಹುದ್ದೆಗಳಿಗೆ ಆಗಸ್ಟ್ 11 ರಂದು ಹಾಗೂ HK ವೃಂದದ 50 ಗ್ರೂಪ್ ಬಿ.ಉದ್ದೆಗಳಿಗೆ 2024 ಆಗಸ್ಟ್ 25 ರಂದು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಈ ಹಿಂದೆ ಆದೇಶಿಸಿತ್ತು. ಇದೀಗ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಲಿಖಿತ ಪರೀಕ್ಷೆಯನ್ನು ಮುಂದೂಡಿ 2024 ಸೆಪ್ಟೆಂಬರ್ 14 ಮತ್ತು 15 ರಂದು ಹಾಗೂ ಅಕ್ಟೋಬರ್ 19 ಮತ್ತು 20 ರಂದು ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಮುಂದಿನ ತಿಂಗಳು ಆಗಸ್ಟ್ 25 ರಂದು ರಾಜ್ಯ ಲೋಕಸೇವಾ ಆಯೋಗವು ಕೆಪಿಎಸ್ ಸಿ ಗೆಜೆಟೆಡ್ ಪ್ರೊಭೆಷನರಿ ಹುದ್ದೆಗಳಿಗೆ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ನಿಗದಿ ಮಾಡಿತ್ತು, ಆದರೆ, ಕೇಂದ್ರ ಸರ್ಕಾರದ ಬ್ಯಾಂಕಿಂಗ್ ಪರೀಕ್ಷೆಯೂ ಕೂಡ (ಐಬಿಪಿಎಸ್) ಅದೇ ದಿನ ನಿಗದಿಯಾಗಿತ್ತು, ಒಂದೇ ದಿನ ನಡೆಯುವ ಎರಡು ಪರೀಕ್ಷೆಗಳಿಂದ 5 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಗೊಂದಲಕ್ಕೀಡಾಗಿ ಅವಕಾಶಗಳಿಂದ ವಂಚಿತರಾಗಲಿದ್ದರು, ಪೂರ್ವಭಾವಿ ಪರೀಕ್ಷೆಯನ್ನು ತಕ್ಷಣ ಮುಂದೂಡಿ ಪರೀಕ್ಷಾ ದಿನಾಂಕವನ್ನು ಮರು ನಿಗದಿ ಮಾಡುವ ಮೂಲಕ ನಿರುದ್ಯೋಗಿ ಪದವೀಧರ ಅಭ್ಯರ್ಥಿಗಳ ಹಿತ ಕಾಪಾಡುವಂತೆ ಸಭಾಪತಿಗಳ ಮೂಲಕ ರಾಜ್ಯ ಸರ್ಕಾರವನ್ನು ಶುಕ್ರವಾರ ನಡೆದ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರು ವಿಷಯ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದು ಆಗ್ರಹಿಸಿದ್ದರು.

ಸರ್ಕಾರವು ದಿನಾಂಕ 11-08-2024ಕ್ಕೆ ನಿಗದಿಪಡಿಸಿದ್ದ ಪರೀಕ್ಷೆಯನ್ನು ಮುಂದೂಡಿದ್ದು,ಪದವೀಧರರ ಪರವಾಗಿ ತಮ್ಮ ಮನವಿಗೆ ಸ್ಪಂದಿಸಿದಕ್ಕೆ ಡಾ. ಧನಂಜಯ ಸರ್ಜಿ ಅವರು ರಾಜ್ಯ ಸರ್ಕಾರಕ್ಕೆ ಧನ್ಯವಾದವನ್ನು ಸಲ್ಲಿಸಿದ್ದಾರೆ. ದಿನಾಂಕ 25-08-2024 ರಂದು ನಿಗದಿಪಡಿಸಿರುವ ಕೆಎಎಸ್ ಪರೀಕ್ಷೆ ಯು IBPS ಬ್ಯಾಂಕಿಂಗ್ ಪರೀಕ್ಷೆ ಮತ್ತು UGC NET ಪರೀಕ್ಷೆಯೊಂದಿಗೆ ನಿಗದಿಪಡಿಸಿದ್ದು ತಕ್ಷಣ ಸರ್ಕಾರವು ಗಮನಹರಿಸಿ ಲಕ್ಷಾಂತರ ಪದವಿಧರರ ಗೊಂದಲವನ್ನು ಪರಿಹರಿಸಬೇಕಾಗಿ ಡಾ.ಧನಂಜಯ ಸರ್ಜಿರವರು ಆಗ್ರಹಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago