Featured

ಪರಿಷತ್ ನಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪದಿಸಿದ ರಾಜ್ಯ ಸರ್ಕಾರ  – vishwanews24

ಪರಿಷತ್ ನಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪದಿಸಿದ ರಾಜ್ಯ ಸರ್ಕಾರ

ಗೊಂದಲಕ್ಕೀಡಾದ ಲೋಕಸೇವಾ ಆಯೋಗದ ಪರೀಕ್ಷಾ ವೇಳಾ ಪಟ್ಟಿಯನ್ನು ತಕ್ಷಣ ಬದಲಿಸುವಂತೆ ಆದೇಶ

ಗೊಂದಲಕ್ಕೀಡಾದ ಲೋಕಸೇವಾ ಆಯೋಗದ ಪರೀಕ್ಷಾ ವೇಳಾ ಪಟ್ಟಿಯನ್ನು ತಕ್ಷಣ ಬದಲಿಸುವಂತೆ ವಿಧಾನ ಪರಿಷತ್ ಅಧಿವೇಶನದಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಕೆಪಿಎಸ್ ಸಿ ಪರೀಕ್ಷಾ ದಿನಾಂಕವನ್ನು ಬದಲಿಸಿ ಶನಿವಾರ ಆದೇಶ ಹೊರಡಿಸಿದೆ.

ಕರ್ನಾಟಕ ಲೋಕಸೇವಾ ಆಯೋಗದಿಂದ ಹೊರಡಿಸಲಾಗಿದ್ದ ವಿವಿಧ ಲಾಖೆಗಳಲ್ಲಿನ NON HK ವೃಂದದ 227 ಗ್ರೂಪ್ ಬಿ.ಹುದ್ದೆಗಳಿಗೆ ಆಗಸ್ಟ್ 11 ರಂದು ಹಾಗೂ HK ವೃಂದದ 50 ಗ್ರೂಪ್ ಬಿ.ಉದ್ದೆಗಳಿಗೆ 2024 ಆಗಸ್ಟ್ 25 ರಂದು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಈ ಹಿಂದೆ ಆದೇಶಿಸಿತ್ತು. ಇದೀಗ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಲಿಖಿತ ಪರೀಕ್ಷೆಯನ್ನು ಮುಂದೂಡಿ 2024 ಸೆಪ್ಟೆಂಬರ್ 14 ಮತ್ತು 15 ರಂದು ಹಾಗೂ ಅಕ್ಟೋಬರ್ 19 ಮತ್ತು 20 ರಂದು ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಮುಂದಿನ ತಿಂಗಳು ಆಗಸ್ಟ್ 25 ರಂದು ರಾಜ್ಯ ಲೋಕಸೇವಾ ಆಯೋಗವು ಕೆಪಿಎಸ್ ಸಿ ಗೆಜೆಟೆಡ್ ಪ್ರೊಭೆಷನರಿ ಹುದ್ದೆಗಳಿಗೆ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ನಿಗದಿ ಮಾಡಿತ್ತು, ಆದರೆ, ಕೇಂದ್ರ ಸರ್ಕಾರದ ಬ್ಯಾಂಕಿಂಗ್ ಪರೀಕ್ಷೆಯೂ ಕೂಡ (ಐಬಿಪಿಎಸ್) ಅದೇ ದಿನ ನಿಗದಿಯಾಗಿತ್ತು, ಒಂದೇ ದಿನ ನಡೆಯುವ ಎರಡು ಪರೀಕ್ಷೆಗಳಿಂದ 5 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಗೊಂದಲಕ್ಕೀಡಾಗಿ ಅವಕಾಶಗಳಿಂದ ವಂಚಿತರಾಗಲಿದ್ದರು, ಪೂರ್ವಭಾವಿ ಪರೀಕ್ಷೆಯನ್ನು ತಕ್ಷಣ ಮುಂದೂಡಿ ಪರೀಕ್ಷಾ ದಿನಾಂಕವನ್ನು ಮರು ನಿಗದಿ ಮಾಡುವ ಮೂಲಕ ನಿರುದ್ಯೋಗಿ ಪದವೀಧರ ಅಭ್ಯರ್ಥಿಗಳ ಹಿತ ಕಾಪಾಡುವಂತೆ ಸಭಾಪತಿಗಳ ಮೂಲಕ ರಾಜ್ಯ ಸರ್ಕಾರವನ್ನು ಶುಕ್ರವಾರ ನಡೆದ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರು ವಿಷಯ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದು ಆಗ್ರಹಿಸಿದ್ದರು.

ಸರ್ಕಾರವು ದಿನಾಂಕ 11-08-2024ಕ್ಕೆ ನಿಗದಿಪಡಿಸಿದ್ದ ಪರೀಕ್ಷೆಯನ್ನು ಮುಂದೂಡಿದ್ದು,ಪದವೀಧರರ ಪರವಾಗಿ ತಮ್ಮ ಮನವಿಗೆ ಸ್ಪಂದಿಸಿದಕ್ಕೆ ಡಾ. ಧನಂಜಯ ಸರ್ಜಿ ಅವರು ರಾಜ್ಯ ಸರ್ಕಾರಕ್ಕೆ ಧನ್ಯವಾದವನ್ನು ಸಲ್ಲಿಸಿದ್ದಾರೆ. ದಿನಾಂಕ 25-08-2024 ರಂದು ನಿಗದಿಪಡಿಸಿರುವ ಕೆಎಎಸ್ ಪರೀಕ್ಷೆ ಯು IBPS ಬ್ಯಾಂಕಿಂಗ್ ಪರೀಕ್ಷೆ ಮತ್ತು UGC NET ಪರೀಕ್ಷೆಯೊಂದಿಗೆ ನಿಗದಿಪಡಿಸಿದ್ದು ತಕ್ಷಣ ಸರ್ಕಾರವು ಗಮನಹರಿಸಿ ಲಕ್ಷಾಂತರ ಪದವಿಧರರ ಗೊಂದಲವನ್ನು ಪರಿಹರಿಸಬೇಕಾಗಿ ಡಾ.ಧನಂಜಯ ಸರ್ಜಿರವರು ಆಗ್ರಹಿಸಿದ್ದಾರೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

17 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

17 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

17 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

17 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

17 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

18 hours ago