Featured

ಪರಿಷತ್ ನಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪದಿಸಿದ ರಾಜ್ಯ ಸರ್ಕಾರ  – vishwanews24

ಪರಿಷತ್ ನಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪದಿಸಿದ ರಾಜ್ಯ ಸರ್ಕಾರ

ಗೊಂದಲಕ್ಕೀಡಾದ ಲೋಕಸೇವಾ ಆಯೋಗದ ಪರೀಕ್ಷಾ ವೇಳಾ ಪಟ್ಟಿಯನ್ನು ತಕ್ಷಣ ಬದಲಿಸುವಂತೆ ಆದೇಶ

ಗೊಂದಲಕ್ಕೀಡಾದ ಲೋಕಸೇವಾ ಆಯೋಗದ ಪರೀಕ್ಷಾ ವೇಳಾ ಪಟ್ಟಿಯನ್ನು ತಕ್ಷಣ ಬದಲಿಸುವಂತೆ ವಿಧಾನ ಪರಿಷತ್ ಅಧಿವೇಶನದಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಕೆಪಿಎಸ್ ಸಿ ಪರೀಕ್ಷಾ ದಿನಾಂಕವನ್ನು ಬದಲಿಸಿ ಶನಿವಾರ ಆದೇಶ ಹೊರಡಿಸಿದೆ.

ಕರ್ನಾಟಕ ಲೋಕಸೇವಾ ಆಯೋಗದಿಂದ ಹೊರಡಿಸಲಾಗಿದ್ದ ವಿವಿಧ ಲಾಖೆಗಳಲ್ಲಿನ NON HK ವೃಂದದ 227 ಗ್ರೂಪ್ ಬಿ.ಹುದ್ದೆಗಳಿಗೆ ಆಗಸ್ಟ್ 11 ರಂದು ಹಾಗೂ HK ವೃಂದದ 50 ಗ್ರೂಪ್ ಬಿ.ಉದ್ದೆಗಳಿಗೆ 2024 ಆಗಸ್ಟ್ 25 ರಂದು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಈ ಹಿಂದೆ ಆದೇಶಿಸಿತ್ತು. ಇದೀಗ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಲಿಖಿತ ಪರೀಕ್ಷೆಯನ್ನು ಮುಂದೂಡಿ 2024 ಸೆಪ್ಟೆಂಬರ್ 14 ಮತ್ತು 15 ರಂದು ಹಾಗೂ ಅಕ್ಟೋಬರ್ 19 ಮತ್ತು 20 ರಂದು ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಮುಂದಿನ ತಿಂಗಳು ಆಗಸ್ಟ್ 25 ರಂದು ರಾಜ್ಯ ಲೋಕಸೇವಾ ಆಯೋಗವು ಕೆಪಿಎಸ್ ಸಿ ಗೆಜೆಟೆಡ್ ಪ್ರೊಭೆಷನರಿ ಹುದ್ದೆಗಳಿಗೆ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ನಿಗದಿ ಮಾಡಿತ್ತು, ಆದರೆ, ಕೇಂದ್ರ ಸರ್ಕಾರದ ಬ್ಯಾಂಕಿಂಗ್ ಪರೀಕ್ಷೆಯೂ ಕೂಡ (ಐಬಿಪಿಎಸ್) ಅದೇ ದಿನ ನಿಗದಿಯಾಗಿತ್ತು, ಒಂದೇ ದಿನ ನಡೆಯುವ ಎರಡು ಪರೀಕ್ಷೆಗಳಿಂದ 5 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಗೊಂದಲಕ್ಕೀಡಾಗಿ ಅವಕಾಶಗಳಿಂದ ವಂಚಿತರಾಗಲಿದ್ದರು, ಪೂರ್ವಭಾವಿ ಪರೀಕ್ಷೆಯನ್ನು ತಕ್ಷಣ ಮುಂದೂಡಿ ಪರೀಕ್ಷಾ ದಿನಾಂಕವನ್ನು ಮರು ನಿಗದಿ ಮಾಡುವ ಮೂಲಕ ನಿರುದ್ಯೋಗಿ ಪದವೀಧರ ಅಭ್ಯರ್ಥಿಗಳ ಹಿತ ಕಾಪಾಡುವಂತೆ ಸಭಾಪತಿಗಳ ಮೂಲಕ ರಾಜ್ಯ ಸರ್ಕಾರವನ್ನು ಶುಕ್ರವಾರ ನಡೆದ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರು ವಿಷಯ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದು ಆಗ್ರಹಿಸಿದ್ದರು.

ಸರ್ಕಾರವು ದಿನಾಂಕ 11-08-2024ಕ್ಕೆ ನಿಗದಿಪಡಿಸಿದ್ದ ಪರೀಕ್ಷೆಯನ್ನು ಮುಂದೂಡಿದ್ದು,ಪದವೀಧರರ ಪರವಾಗಿ ತಮ್ಮ ಮನವಿಗೆ ಸ್ಪಂದಿಸಿದಕ್ಕೆ ಡಾ. ಧನಂಜಯ ಸರ್ಜಿ ಅವರು ರಾಜ್ಯ ಸರ್ಕಾರಕ್ಕೆ ಧನ್ಯವಾದವನ್ನು ಸಲ್ಲಿಸಿದ್ದಾರೆ. ದಿನಾಂಕ 25-08-2024 ರಂದು ನಿಗದಿಪಡಿಸಿರುವ ಕೆಎಎಸ್ ಪರೀಕ್ಷೆ ಯು IBPS ಬ್ಯಾಂಕಿಂಗ್ ಪರೀಕ್ಷೆ ಮತ್ತು UGC NET ಪರೀಕ್ಷೆಯೊಂದಿಗೆ ನಿಗದಿಪಡಿಸಿದ್ದು ತಕ್ಷಣ ಸರ್ಕಾರವು ಗಮನಹರಿಸಿ ಲಕ್ಷಾಂತರ ಪದವಿಧರರ ಗೊಂದಲವನ್ನು ಪರಿಹರಿಸಬೇಕಾಗಿ ಡಾ.ಧನಂಜಯ ಸರ್ಜಿರವರು ಆಗ್ರಹಿಸಿದ್ದಾರೆ.

Vishwa News 24

Recent Posts

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

12 seconds ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

9 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

45 minutes ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

54 minutes ago

ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…

1 hour ago

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  – vishwanews24

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…

1 hour ago