ರಾಮನಗರ: ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್ ಸ್ಟುಡಿಯೋಸ್ಗೆ ಬೀಗ ಬಿದ್ದಿದೆ. ಬಿಗ್ ಬಾಸ್ ನಡೆಯುತ್ತಿರುವ ಜಾಗಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ನಿಯಮ ಮೀರಿ ಜಾಲಿವುಡ್ ಸ್ಟುಡಿಯೋಸ್ ನಡೆಸುತ್ತಿರುವ ಬಗ್ಗೆ ನೋಟಿಸ್ ನೀಡಲಾಗಿತ್ತು. ಆದರೆ, ಯಾವುದೇ ಪಾಲನೆ ಆಗದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಇಂದು ಸಂಜೆ ಸ್ಟುಡಿಯೋಸ್ಗೆ ಭೇಟಿ ನೀಡಿದರು.
ರಾಮನಗರ ತಹಶೀಲ್ದಾರ್ ತೇಜಸ್ವಿನಿ, ಕಂದಾಪರಿಸರ ನಿಯಮ ಉಲ್ಲಂಘನೆ ಆರೋಪಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಜಾಲಿವುಡ್ ಒಳಗೆ ಪರಿಶೀಲನೆ ನಡೆಸಿದರು.
ನೋಟಿಸ್ ತೆಗೆದುಕೊಳ್ಳಲು ಜಾಲಿವುಡ್ ಆಡಳಿತ ಮಂಡಳಿ ನಕಾರ ಮಾಡಿತು. ಆಗ ಜಾಲಿವುಡ್ ಸ್ಟುಡಿಯೋಸ್ ಸಿಬ್ಬಂದಿಯನ್ನು ತಹಶೀಲ್ದಾರ್ ತರಾಟೆಗೆ ತೆಗೆದುಕೊಂಡರು. ನೋಟಿಸ್ ಸ್ವೀಕರಿಸೋದಕ್ಕೆ ಬರಲು ಅರ್ಧ ಗಂಟೆ ಬೇಕಾ ಎಂದು ಗರಂ ಆದರು.
ಕೂಡಲೇ ನೋಟೀಸ್ ತೆಗೆದುಕೊಳ್ಳಿ. ಅಧಿಕೃತವಾಗಿ ಇಂದು ಸೀಜ್ ಮಾಡ್ತೀವಿ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಂಜೆ 7 ಗಂಟೆ ವರೆಗೂ ಎಕ್ಸಿಟ್ ಗೇಟ್ ಓಪನ್ ಮಾಡಿಕೊಳ್ಳಿ. ಕೂಡಲೇ ಜಾಲಿವುಡ್ ಸ್ಟುಡಿಯೋ ಕ್ಲೋಸ್ ಮಾಡುವಂತೆ ಸೂಚನೆ ನೀಡಿದರು.
ಕೊನೆಗೆ ಜಾಲಿವುಡ್ ಆಡಳಿತ ಮಂಡಳಿ ನೋಟಿಸ್ ಸ್ವೀಕರಿಸಿತು. ನಾಳೆಯಿಂದ ಜಾಲಿವುಡ್ ಸ್ಟುಡಿಯೋಸ್ ಯಾವುದೇ ಕಾರ್ಯಾಚರಣೆ ಮಾಡಬಾರದು. ಎಲ್ಲಾ ರೀತಿಯ ಕಾರ್ಯಚಟುವಟಿಕೆ ಸ್ಥಗಿತ ಮಾಡುವಂತೆ ಸೂಚನೆ ನೀಡಲಾಯಿತು. ಸ್ಟುಡಿಯೋಸ್ ಸ್ವತಃ ತಾವೇ ನಿಂತು ತಹಶೀಲ್ದಾರ್ ಬೀಗ ಹಾಕಿದರು. ಬಿಗ್ ಬಾಸ್ ಸ್ಥಗಿತಕ್ಕೂ ಸೂಚನೆ ನೀಡಿದರು
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…