Featured

ಪರಿಹಾರದ ಹಣಕ್ಕಾಗಿ  ಕೇಂದ್ರಕ್ಕೆ ಹೋಗುವ ಅಗತ್ಯವಿಲ್ಲ. ಆರ್ಥಿಕವಾಗಿ ಸದೃಢವಾಗಿರುವ ರಾಜ್ಯ ಸರ್ಕಾರವೇ ನೆರೆ ಪರಿಹಾರ ಘೋಷಿಸಿದೆ : ತೇಜಸ್ವಿ ಸೂರ್ಯ -Vishwanews24

ಬೆಳಗಾವಿ: ‘‌‌‌ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ 14ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ ರಾಜ್ಯಗಳಿಗೆ ಹೆಚ್ಚಿನ ಅನುದಾನ ಸಿಗುವಂತೆ ಮಾಡಲಾಗಿದೆ. ಹೀಗಾಗಿ, ನೆರೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರವು ಕೇಂದ್ರದ ಮೊರೆ ಹೋಗಬೇಕಿಲ್ಲ’ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಅತಿವೃಷ್ಟಿಯಾದ ಸಂದರ್ಭಗಳಲ್ಲಿ ರಾಜ್ಯವು ಕೇಂದ್ರದ ಕದ ತಟ್ಟದಿರಲೆಂಬ ಉದ್ದೇಶದಿಂದ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ. ಹೀಗಾಗಿ, ಪರಿಹಾರದ ಹಣಕ್ಕಾಗಿ ಹಿಂದಿನಂತೆ ಕೇಂದ್ರಕ್ಕೆ ಹೋಗುವ ಅಗತ್ಯವಿಲ್ಲ. ಆರ್ಥಿಕವಾಗಿ ಸದೃಢವಾಗಿರುವ ರಾಜ್ಯ ಸರ್ಕಾರವೇ ನೆರೆ ಪರಿಹಾರ ಘೋಷಿಸಿದೆ’ ಎಂದು ಸಮರ್ಥಿಸಿಕೊಂಡರು.

‘ರಕ್ಷಣಾ ಕಾರ್ಯಕ್ಕೆ ಬಂದಿದ್ದ ಎನ್.ಡಿ.ಆರ್.ಎಫ್ ತಂಡ ಹಾಗೂ ಸೇನೆಯನ್ನು ಕೇಂದ್ರ ಕಳುಹಿಸಿದೆ. ವೈಮಾನಿಕ ಸಮೀಕ್ಷೆ ನಡೆಸಿದ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಕೇಂದ್ರದ ಪ್ರತಿನಿಧಿಗಳು. ಈ ವಯಸ್ಸಿನಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎನ್ನುವುದು ಸರಿಯಲ್ಲ’ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವೆರಿಗೆ ತಿರುಗೇಟು ನೀಡಿದರು.

‘ಪ್ರವಾಹವನ್ನೇ ನೆಪವಾಗಿಟ್ಟುಕೊಂಡು ಕಾಂಗ್ರೆಸ್ ‌ನಾಯಕರು ರಾಜಕೀಯ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವೇ ಹಣ ನೀಡುತ್ತಿದೆ. ಕೇಂದ್ರವೇ ಘೋಷಿಸಬೇಕೆಂಬ ಹಠ ಕಾಂಗ್ರೆಸ್‌ನವರಿಗೇಕೆ? ಹಾನಿಯ ವರದಿ ಸಲ್ಲಿಸಲಾಗಿದ್ದು, ಕೇಂದ್ರವೂ ಸ್ಪಂದಿಸುವ ಭರವಸೆ ಇದೆ‌. ಎರಡೂ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡುತ್ತಿವೆ’ ಎಂದು ಪ್ರತಿಕ್ರಿಯಿಸಿದರು.

 

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

40 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

48 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 hour ago