Featured

ಪರಿಹಾರ ಕೇಂದ್ರದಲ್ಲಿ ಸಚಿವ ಹೆಚ್‌.ಡಿ.ರೇವಣ್ಣ ಅಮಾನವವೀಯ ವರ್ತನೆ ; ಕೊಡಗು ಸಂತ್ರಸ್ತರಿಗೆ ಬಿಸ್ಕೆಟ್ ಎಸೆದ ಸೂಪರ್ ಸಿಎಂ

ಬೆಂಗಳೂರು: ಮಳೆಯ ಆರ್ಭಟದಿಂದ ಕೊಡಗು ಜನರ ಜೀವನ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅಧಿಕಾರದ ಮದದಲ್ಲಿ ಸಚಿವರೊಬ್ಬರು ಕೊಡಗು ಪ್ರವಾಹದ ನಿರಾಶ್ರಿತರಿಗೆ ತಿಂಡಿ, ತಿನಿಸುಗಳನ್ನು ಎಸೆಯುವ ಮೂಲಕ ಮಾನವೀಯತೆಯನ್ನು ಮರೆತಿದ್ದಾರೆ.

ಸೂಪರ್ ಸಿಎಂ ಎಂದೇ ಬಿಂಬಿತರಾಗಿರುವ ಲೋಕೋಪಯೋಗಿ ಸಚಿವರಾದ ಹೆಚ್.ಡಿ. ರೇವಣ್ಣ ಪ್ರವಾಹ ನಿರಾಶ್ರಿತರಿಗೆ ಬಿಸ್ಕೆಟ್ ಎಸೆಯುವ ಮೂಲಕ ಅಮಾನವೀಯತೆಯನ್ನು ಮೆರೆದಿದ್ದಾರೆ. ಶನಿವಾರ ರೇವಣ್ಣ ಮತ್ತು ಎ.ಟಿ. ರಾಮಸ್ವಾಮಿ ಅವರು ಹಾಸನ ಜಿಲ್ಲೆಯ ರಾಮನಾಥಪುರದ ಸಂತ್ರಸ್ತರ ಶಿಬಿರಕ್ಕೆ ಭೇಟಿ ನೀಡಿದ್ದರು. ಆದರೆ ಅಲ್ಲಿ ಪ್ರವಾಹ ಸಂತ್ರಸ್ತರಿಗೆ ಸಚಿವ ರೇವಣ್ಣ ಆಹಾರವನ್ನು ಪ್ರಾಣಿಗಳಿಗೆ ಎಸೆಯೋ ರೀತಿ ಬಿಸ್ಕೆಟ್ ಎಸೆದಿದ್ದಾರೆ.

ರೇವಣ್ಣ ಅವರು ಬಂದಿದ್ದು, ನಮ್ಮ ಕಷ್ಟವನ್ನು ಆಲಿಸುತ್ತಾರೆ ಅಂತಾ ನಿರಾಶ್ರಿತರು ಸಚಿವರನ್ನು ಮುತ್ತಿಕೊಂಡಿದ್ದರು. ಈ ವೇಳೆ ರೇವಣ್ಣ ಸಂತ್ರಸ್ತರಿಗೆ ಕೊಡಲು ಒಂದು ಬಾಕ್ಸ್ ಬಿಸ್ಕೆಟ್ ತಂದಿದ್ದರು ಅದನ್ನು ಅಮಾನವೀಯತೆಯಿಂದ ಎಸೆದಿದ್ದಾರೆ. ರೇವಣ್ಣ ಅವರು ಬಿಸ್ಕೆಟ್ ಎಸೆಯುತ್ತಿದ್ದರೆ ಪಕ್ಕದಲ್ಲೇ ನಿಂತಿದ್ದ ಎ.ಟಿ ರಾಮಸ್ವಾಮಿ ಮೂಕಪ್ರೇಕ್ಷಕರಂತೆ ನೋಡುತ್ತಾ ನಿಂತಿದ್ದರು.

ಶಿಬಿರದಲ್ಲಿ ಸುಮಾರು 100 ಜನರು ಇದ್ದರು ಅಷ್ಟೇ. ಈಗಾಗಲೇ ಎಲ್ಲರಿಗೂ ಜಿಲ್ಲಾಧಿಕಾರಿ ಮತ್ತು ತಾಲೂಕು ಸದ್ಯರೆಲ್ಲರೂ ಆಶ್ರಯ ನೀಡಿದ್ದರು. ನಮ್ಮ ಕ್ಷೇತ್ರ ಏನೋ ಬರುಬೇಕು ಎಂದು ಪ್ರಚಾರಕ್ಕಾಗಿ ಮತ್ತು ಕಾಟಚಾರಕ್ಕಾಗಿ ಬಂದು ಬಿಸ್ಕೆಟ್ ಎಸೆದು ಹೋಗಿದ್ದಾರೆ. ಅಲ್ಲೇ ಪಕ್ಕದಲ್ಲಿದ್ದ ರಾಮಸ್ವಾಮಿ ಅವರು ಸುಮ್ಮನೆ ನೋಡುತ್ತಾ ನಿಂತಿದ್ದರು. ರೇವಣ್ಣ ಅವರು ನಡೆ ನಿಜಕ್ಕೂ ಬೇಸರವಾಯಿತು ಎಂದು ಸ್ಥಳೀಯ ಗಣೇಶ್  ಹೇಳಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮೂರು ದಿನಗಳಿಂದ ಪ್ರವಾಹ ಪೀಡಿತ ಸ್ಥಳಕ್ಕೆ ಹೋಗಿ ಜನರ ಬಳಿ ಸ್ವತಃ ಅವರೇ ಕಷ್ಟವನ್ನು ಆಲಿಸುತ್ತಿದ್ದಾರೆ. ಆದರೆ ರೇವಣ್ಣ ಅಧಿಕಾರ ಮದದಲ್ಲಿ ಈ ರೀತಿಯಾಗಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

7 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

10 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

10 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

11 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

11 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

11 hours ago