Featured

ಪರಿಹಾರ ಕೇಂದ್ರದಲ್ಲಿ ಸಚಿವ ಹೆಚ್‌.ಡಿ.ರೇವಣ್ಣ ಅಮಾನವವೀಯ ವರ್ತನೆ ; ಕೊಡಗು ಸಂತ್ರಸ್ತರಿಗೆ ಬಿಸ್ಕೆಟ್ ಎಸೆದ ಸೂಪರ್ ಸಿಎಂ

ಬೆಂಗಳೂರು: ಮಳೆಯ ಆರ್ಭಟದಿಂದ ಕೊಡಗು ಜನರ ಜೀವನ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅಧಿಕಾರದ ಮದದಲ್ಲಿ ಸಚಿವರೊಬ್ಬರು ಕೊಡಗು ಪ್ರವಾಹದ ನಿರಾಶ್ರಿತರಿಗೆ ತಿಂಡಿ, ತಿನಿಸುಗಳನ್ನು ಎಸೆಯುವ ಮೂಲಕ ಮಾನವೀಯತೆಯನ್ನು ಮರೆತಿದ್ದಾರೆ.

ಸೂಪರ್ ಸಿಎಂ ಎಂದೇ ಬಿಂಬಿತರಾಗಿರುವ ಲೋಕೋಪಯೋಗಿ ಸಚಿವರಾದ ಹೆಚ್.ಡಿ. ರೇವಣ್ಣ ಪ್ರವಾಹ ನಿರಾಶ್ರಿತರಿಗೆ ಬಿಸ್ಕೆಟ್ ಎಸೆಯುವ ಮೂಲಕ ಅಮಾನವೀಯತೆಯನ್ನು ಮೆರೆದಿದ್ದಾರೆ. ಶನಿವಾರ ರೇವಣ್ಣ ಮತ್ತು ಎ.ಟಿ. ರಾಮಸ್ವಾಮಿ ಅವರು ಹಾಸನ ಜಿಲ್ಲೆಯ ರಾಮನಾಥಪುರದ ಸಂತ್ರಸ್ತರ ಶಿಬಿರಕ್ಕೆ ಭೇಟಿ ನೀಡಿದ್ದರು. ಆದರೆ ಅಲ್ಲಿ ಪ್ರವಾಹ ಸಂತ್ರಸ್ತರಿಗೆ ಸಚಿವ ರೇವಣ್ಣ ಆಹಾರವನ್ನು ಪ್ರಾಣಿಗಳಿಗೆ ಎಸೆಯೋ ರೀತಿ ಬಿಸ್ಕೆಟ್ ಎಸೆದಿದ್ದಾರೆ.

ರೇವಣ್ಣ ಅವರು ಬಂದಿದ್ದು, ನಮ್ಮ ಕಷ್ಟವನ್ನು ಆಲಿಸುತ್ತಾರೆ ಅಂತಾ ನಿರಾಶ್ರಿತರು ಸಚಿವರನ್ನು ಮುತ್ತಿಕೊಂಡಿದ್ದರು. ಈ ವೇಳೆ ರೇವಣ್ಣ ಸಂತ್ರಸ್ತರಿಗೆ ಕೊಡಲು ಒಂದು ಬಾಕ್ಸ್ ಬಿಸ್ಕೆಟ್ ತಂದಿದ್ದರು ಅದನ್ನು ಅಮಾನವೀಯತೆಯಿಂದ ಎಸೆದಿದ್ದಾರೆ. ರೇವಣ್ಣ ಅವರು ಬಿಸ್ಕೆಟ್ ಎಸೆಯುತ್ತಿದ್ದರೆ ಪಕ್ಕದಲ್ಲೇ ನಿಂತಿದ್ದ ಎ.ಟಿ ರಾಮಸ್ವಾಮಿ ಮೂಕಪ್ರೇಕ್ಷಕರಂತೆ ನೋಡುತ್ತಾ ನಿಂತಿದ್ದರು.

ಶಿಬಿರದಲ್ಲಿ ಸುಮಾರು 100 ಜನರು ಇದ್ದರು ಅಷ್ಟೇ. ಈಗಾಗಲೇ ಎಲ್ಲರಿಗೂ ಜಿಲ್ಲಾಧಿಕಾರಿ ಮತ್ತು ತಾಲೂಕು ಸದ್ಯರೆಲ್ಲರೂ ಆಶ್ರಯ ನೀಡಿದ್ದರು. ನಮ್ಮ ಕ್ಷೇತ್ರ ಏನೋ ಬರುಬೇಕು ಎಂದು ಪ್ರಚಾರಕ್ಕಾಗಿ ಮತ್ತು ಕಾಟಚಾರಕ್ಕಾಗಿ ಬಂದು ಬಿಸ್ಕೆಟ್ ಎಸೆದು ಹೋಗಿದ್ದಾರೆ. ಅಲ್ಲೇ ಪಕ್ಕದಲ್ಲಿದ್ದ ರಾಮಸ್ವಾಮಿ ಅವರು ಸುಮ್ಮನೆ ನೋಡುತ್ತಾ ನಿಂತಿದ್ದರು. ರೇವಣ್ಣ ಅವರು ನಡೆ ನಿಜಕ್ಕೂ ಬೇಸರವಾಯಿತು ಎಂದು ಸ್ಥಳೀಯ ಗಣೇಶ್  ಹೇಳಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮೂರು ದಿನಗಳಿಂದ ಪ್ರವಾಹ ಪೀಡಿತ ಸ್ಥಳಕ್ಕೆ ಹೋಗಿ ಜನರ ಬಳಿ ಸ್ವತಃ ಅವರೇ ಕಷ್ಟವನ್ನು ಆಲಿಸುತ್ತಿದ್ದಾರೆ. ಆದರೆ ರೇವಣ್ಣ ಅಧಿಕಾರ ಮದದಲ್ಲಿ ಈ ರೀತಿಯಾಗಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

Vishwa News 24

Recent Posts

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

14 minutes ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

21 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

21 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

21 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

22 hours ago