Featured

ಪರಿಹಾರ ನೀಡಲು ಸಿದ್ಧಪಡಿಸಿದ್ದ ಪಟ್ಟಿಯಲ್ಲಿ ಫಾಝಿಲ್‌ ಕುಟುಂಬದ ಹೆಸರೂ ಇದೆ , ಅವರಿಗೂ ಪರಿಹಾರ ಸಿಗಲಿದೆ : ಶಾಸಕ ಭರತ್ ಶೆಟ್ಟಿ  – Vishwanews24

ಪರಿಹಾರ ನೀಡಲು ಸಿದ್ಧಪಡಿಸಿದ್ದ ಪಟ್ಟಿಯಲ್ಲಿ ಫಾಝಿಲ್‌ ಕುಟುಂಬದ ಹೆಸರೂ ಇದೆ , ಅವರಿಗೂ ಪರಿಹಾರ ಸಿಗಲಿದೆ : ಶಾಸಕ ಭರತ್ ಶೆಟ್ಟಿ

ಮಂಗಳೂರು : ಸುರತ್ಕಲ್ ನಲ್ಲಿ ಹತ್ಯೆಗೀಡಾದ ಫಾಝಿಲ್ ನ ಕುಟುಂಬದವರಿಗೂ ಪರಿಹಾರ ಸಿಗಲಿದ್ದು, ಪರಿಹಾರ ನೀಡಲು ಸಿದ್ದಪಡಿಸಿದ ಪಟ್ಟಿಯಲ್ಲಿ ಫಾಝಿಲ್ ಕುಟುಂಬದವರೂ ಇದ್ದಾರೆ ಎಂದು ಶಾಸಕ ಭರತ್ ಶೆಟ್ಟಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು ಫಾಝಿಲ್ ಹತ್ಯೆ ಸಂದರ್ಭ ಮನೆಗೆ ಭೇಟಿ ನೀಡಬೇಕೆಂದು ಯೋಚಿಸಿದ್ದೆ ಆದರೆ ನನ್ನ ಭೇಟಿ ವೇಳೆ ಗಲಾಟೆ ನಡೆಸಲು ಸಂಚು ರೂಪಿಸಿದ್ದ ಬಗ್ಗೆ ಮಾಹಿತಿ ಬಂದಿತ್ತು. ಈ ಹಿಂದೆ ದೀಪಕ್‌ರಾವ್‌ ಹಾಗೂ ಇನ್ನೊಬ್ಬ ವ್ಯಕ್ತಿ ಸತ್ತಾಗ ಸಂತ್ರಸ್ತರ ಮನೆಗೆ ಶಾಸಕರು ಭೇಟಿ ನೀಡಿದಾಗಲೂ ಘೆರಾವ್‌ ಹಾಕಲಾಗಿತ್ತು. ನನ್ನ ಭೇಟಿಯು ಮತ್ತಷ್ಟು ಗಲಾಟೆಯನ್ನು ಉಂಟುಮಾಡುವುದು ‌ಬೇಡ ಎಂಬ ಕಾರಣಕ್ಕೆ ನಾನು ಅವರ ಮನೆಗೆ ಹೋಗಿಲ್ಲ’ ಎಂದು ಸ್ಪಷ್ಟನೆ ನೀಡಿದರು. ಬಳಿಕ ಪರಿಸ್ಥಿತಿ ತಿಳಿಯಾದಾಗ ಹೋಗಿ ಪರಿಹಾರ ಘೋಷಿಸಬಹುದಿತ್ತಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಅವರ ಕುಟುಂಬದವರು ಯಾರೂ ಪರಿಹಾರದ ಬಗ್ಗೆ ನನ್ನ ಬಳಿ ಬೇಡಿಕೆ ಇಟ್ಟಿಲ್ಲ. ಅವರು ಕೇಳಬೇಕೆಂದೂ ಇಲ್ಲ. ಪರಿಹಾರ ನೀಡಲು ಸಿದ್ಧಪಡಿಸಿದ್ದ ಪಟ್ಟಿಯಲ್ಲಿ ಫಾಝಿಲ್‌ ಕುಟುಂಬದ ಹೆಸರೂ ಇದೆ. ಅವರಿಗೂ ಪರಿಹಾರ ಸಿಗಲಿದೆ’ ಎಂದರು.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago