Featured

ಪರೀಕ್ಷೆ ವೇಳೆ ನಿದ್ರೆ ತಪ್ಪಿಸಲು ಉಗ್ರರು ಬಳಸುವ ಮಾತ್ರೆ ಸೇವಿಸುತ್ತಿರುವ ವಿದ್ಯಾರ್ಥಿಗಳು : ಏನಿದು ಮಾತ್ರೆ? – ಆಘಾತಕಾರಿ ಸುದ್ದಿ ಓದಿ.. Vishwanews24

ಪರೀಕ್ಷೆ ಸಮಯದಲ್ಲಿ ನಿದ್ರೆ ತಪ್ಪಿಸಲು ಉಗ್ರರು ಬಳಸುವ ಮಾತ್ರೆ ಸೇವಿಸುತ್ತಿರುವ ವಿದ್ಯಾರ್ಥಿಗಳು ; ಶಾಕಿಂಗ್ ಮಾಹಿತಿ ಬೆಳಕಿಗೆ ..

1 ಮಾತ್ರೆ ಸುಮಾರು 40 ಗಂಟೆಗಳ ಕಾಲ ಎಚ್ಚರದಿಂದ ಇರುವಂತೆ ಮಾಡುತ್ತದೆ..

ಈ ಮಾತ್ರೆಗಳನ್ನು ವಿದ್ಯಾರ್ಥಿಗಳು ಸೇವಿಸುತ್ತಿರುವುದು ಆತಂಕಕಾರಿ..

ಈ ಮಾತ್ರೆಯಿಂದ ಗಂಭೀರ ಆರೋಗ್ಯ ಸಮಸ್ಯೆ..

ಲಕ್ನೋ: ಇನ್ನೇನು ಕೆಲವೇ ದಿನಗಳಲ್ಲಿ 10ನೇ ತರಗತಿ ಪರೀಕ್ಷೆ ನಡೆಯುತ್ತದೆ. ಈ ಸಮಯದಲ್ಲಿ ನಿದ್ದೆ ಬರಬಾರದೆಂದು ಶಾಲಾ ಮಕ್ಕಳು ಭಯೋತ್ಪಾದಕರು ತೆಗೆದುಕೊಳ್ಳುವಂತಹ ಮಾತ್ರೆಗಳನ್ನು ಸೇವಿಸುತ್ತಿರುವ ಆಘಾತಕಾರಿ ವಿಚಾರವೊಂದು ಬಯಲಾಗಿದೆ.

ಈ ಸಂಬಂಧ ವೈದ್ಯ ಲೋಕ ಕೂಡ ಆತಂಕ ವ್ಯಕ್ತಪಡಿಸಿದ್ದು, ಇಂತಹ ಮಾತ್ರೆಗಳನ್ನು ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿದೆ.

ಬೆಳಕಿಗೆ ಬಂದಿದ್ದು ಹೇಗೆ?: ಉತ್ತರ ಪ್ರದೇಶದ ಪ್ರಜಕ್ತಾ ಸ್ವರೂಪ್ ಎಂಬ ವಿದ್ಯಾರ್ಥಿನಿ 10ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಹೀಗಾಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಈಕೆ ಏಕಾಏಕಿ ಕುಸಿದುಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಈ ವೇಳೆ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ತಪಾಸಣೆ ವೇಳೆ ಆಕೆಯ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ನರಗಳು ಊದಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ವೈದ್ಯರು ಆಕೆಗೆ ಶಸ್ತ್ರ ಚಿಕಿತ್ಸೆ ನಡೆಸಿದ್ದು, ಸದ್ಯ ವಿದ್ಯಾರ್ಥಿನಿ ಆರೋಗ್ಯ ಚೇತರಿಸಿಕೊಳ್ಳುತ್ತಿದೆ.

ಇತ್ತ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾದ ಬಳಿಕ ಪೋಷಕರು ಆಕೆ ಓದುತ್ತಿದ್ದ ಕೋಣೆಯನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಲ್ಲಿ ಮಾತ್ರೆಗಳು ತುಂಬಿದ ಬಾಟ್ಲಿಯೊಂದು ಪತ್ತೆಯಾಗಿದೆ. ಇದರಿಂದ ಆತಂಕಗೊಂಡ ಪೋಷಕರು ಮಾತ್ರೆಗಳನ್ನು ವೈದ್ಯರ ಬಳಿ ತೋರಿಸಿದ್ದಾರೆ. ಆಗ ವೈದ್ಯರು, ಇದು ನಿದ್ದೆಯಿಂದ ತಪ್ಪಿಸಿಕೊಳ್ಳಲು ಬಳಸುವ ಮಾತ್ರೆ ಎಂದು ತಿಳಿಸಿದ್ದಾರೆ.

ಈ ಕುರಿತು ಪೋಷಕರು ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ಆಕೆಯೂ ಒಪ್ಪಿಕೊಂಡಿದ್ದಾಳೆ. ಪರೀಕ್ಷೆಯ ಸಮಯದಲ್ಲಿ ರಾತ್ರಿಯಿಡೀ ಎಚ್ಚರದಿಂದ ಇರಲು ಈ ಮಾತ್ರೆ ಸೇವಿಸುತ್ತಿದ್ದೆ ಎಂದಿದ್ದಾಳೆ. ಇದು ವೈದ್ಯರು ಹಾಗೂ ಪೋಷಕರನ್ನು ದಿಗ್ಭ್ರಮೆಗೊಳಿಸಿದೆ.

ಏನಿದು ನಿದ್ರೆ ತಡೆಯುವ ಮಾತ್ರೆ?: ಒಂದು ಮಾತ್ರೆ ಸೇವಿಸಿದರೆ ಸುಮಾರು 40 ಗಂಟೆಗಳ ಕಾಲ ಎಚ್ಚರದಿಂದ ಇರುವಂತೆ ಮಾಡುತ್ತದೆ. ಸಾಮಾನ್ಯವಾಗಿ ಈ ಮಾತ್ರೆಗಳನ್ನು ಉಗ್ರರು ತೆಗೆದುಕೊಳ್ಳುತ್ತಾರೆ. ಭಯೋತ್ಪಾದಕ ದಾಳಿ ವೇಳೆ ನಿದ್ರೆ ತಪ್ಪಿಸಲು ಉಗ್ರರು ಇಂತಹ ಮಾತ್ರೆಗಳನ್ನು ನುಂಗಿ ಕಾರ್ಯಾಚರಣೆ ಮಾಡುತ್ತಾರೆ. ಇದು ಮಾರುಕಟ್ಟೆಗಳಲ್ಲಿ ಸಿಗಲ್ಲ. ಆದರೆ ಕಳ್ಳ ಮಾರ್ಗದಲ್ಲಿ ಬೇರೆ ಬೇರೆ ಮಾತ್ರೆಗಳ ಹೆಸರಿನಲ್ಲಿ ಭಾರತಕ್ಕೆ ಸಾಗಿಸಲಾಗುತ್ತದೆ.

ಇದೀಗ ಈ ಮಾತ್ರೆಗಳನ್ನು ವಿದ್ಯಾರ್ಥಿಗಳು ಸೇವಿಸುತ್ತಿರುವುದು ಆತಂಕಕಾರಿಯಾಗಿದೆ. ಪರೀಕ್ಷೆಗಳ ಸಮಯಗಳಲ್ಲಿ ಇಂತಹ ಮಾತ್ರೆಗೆ ಬೇಡಿಕೆ ಕೂಡ ಹೆಚ್ಚಾಗುತ್ತದೆ ಎಂದು ಔಷಧ ವ್ಯಾಪಾರಿಗಳು ಹೇಳುತ್ತಾರೆ. 26/11 ಮುಂಬೈ ದಾಳಿ ವೇಳೆ ಮೊದಲ ಬಾರಿ ಈ ಮಾತ್ರೆಗಳು ಪತ್ತೆಯಾಗಿದ್ದವು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago