Featured

ಪರೀಕ್ಷೆ ವೇಳೆ ನಿದ್ರೆ ತಪ್ಪಿಸಲು ಉಗ್ರರು ಬಳಸುವ ಮಾತ್ರೆ ಸೇವಿಸುತ್ತಿರುವ ವಿದ್ಯಾರ್ಥಿಗಳು : ಏನಿದು ಮಾತ್ರೆ? – ಆಘಾತಕಾರಿ ಸುದ್ದಿ ಓದಿ.. Vishwanews24

ಪರೀಕ್ಷೆ ಸಮಯದಲ್ಲಿ ನಿದ್ರೆ ತಪ್ಪಿಸಲು ಉಗ್ರರು ಬಳಸುವ ಮಾತ್ರೆ ಸೇವಿಸುತ್ತಿರುವ ವಿದ್ಯಾರ್ಥಿಗಳು ; ಶಾಕಿಂಗ್ ಮಾಹಿತಿ ಬೆಳಕಿಗೆ ..

1 ಮಾತ್ರೆ ಸುಮಾರು 40 ಗಂಟೆಗಳ ಕಾಲ ಎಚ್ಚರದಿಂದ ಇರುವಂತೆ ಮಾಡುತ್ತದೆ..

ಈ ಮಾತ್ರೆಗಳನ್ನು ವಿದ್ಯಾರ್ಥಿಗಳು ಸೇವಿಸುತ್ತಿರುವುದು ಆತಂಕಕಾರಿ..

ಈ ಮಾತ್ರೆಯಿಂದ ಗಂಭೀರ ಆರೋಗ್ಯ ಸಮಸ್ಯೆ..

ಲಕ್ನೋ: ಇನ್ನೇನು ಕೆಲವೇ ದಿನಗಳಲ್ಲಿ 10ನೇ ತರಗತಿ ಪರೀಕ್ಷೆ ನಡೆಯುತ್ತದೆ. ಈ ಸಮಯದಲ್ಲಿ ನಿದ್ದೆ ಬರಬಾರದೆಂದು ಶಾಲಾ ಮಕ್ಕಳು ಭಯೋತ್ಪಾದಕರು ತೆಗೆದುಕೊಳ್ಳುವಂತಹ ಮಾತ್ರೆಗಳನ್ನು ಸೇವಿಸುತ್ತಿರುವ ಆಘಾತಕಾರಿ ವಿಚಾರವೊಂದು ಬಯಲಾಗಿದೆ.

ಈ ಸಂಬಂಧ ವೈದ್ಯ ಲೋಕ ಕೂಡ ಆತಂಕ ವ್ಯಕ್ತಪಡಿಸಿದ್ದು, ಇಂತಹ ಮಾತ್ರೆಗಳನ್ನು ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿದೆ.

ಬೆಳಕಿಗೆ ಬಂದಿದ್ದು ಹೇಗೆ?: ಉತ್ತರ ಪ್ರದೇಶದ ಪ್ರಜಕ್ತಾ ಸ್ವರೂಪ್ ಎಂಬ ವಿದ್ಯಾರ್ಥಿನಿ 10ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಹೀಗಾಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಈಕೆ ಏಕಾಏಕಿ ಕುಸಿದುಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಈ ವೇಳೆ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ತಪಾಸಣೆ ವೇಳೆ ಆಕೆಯ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ನರಗಳು ಊದಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ವೈದ್ಯರು ಆಕೆಗೆ ಶಸ್ತ್ರ ಚಿಕಿತ್ಸೆ ನಡೆಸಿದ್ದು, ಸದ್ಯ ವಿದ್ಯಾರ್ಥಿನಿ ಆರೋಗ್ಯ ಚೇತರಿಸಿಕೊಳ್ಳುತ್ತಿದೆ.

ಇತ್ತ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾದ ಬಳಿಕ ಪೋಷಕರು ಆಕೆ ಓದುತ್ತಿದ್ದ ಕೋಣೆಯನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಲ್ಲಿ ಮಾತ್ರೆಗಳು ತುಂಬಿದ ಬಾಟ್ಲಿಯೊಂದು ಪತ್ತೆಯಾಗಿದೆ. ಇದರಿಂದ ಆತಂಕಗೊಂಡ ಪೋಷಕರು ಮಾತ್ರೆಗಳನ್ನು ವೈದ್ಯರ ಬಳಿ ತೋರಿಸಿದ್ದಾರೆ. ಆಗ ವೈದ್ಯರು, ಇದು ನಿದ್ದೆಯಿಂದ ತಪ್ಪಿಸಿಕೊಳ್ಳಲು ಬಳಸುವ ಮಾತ್ರೆ ಎಂದು ತಿಳಿಸಿದ್ದಾರೆ.

ಈ ಕುರಿತು ಪೋಷಕರು ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ಆಕೆಯೂ ಒಪ್ಪಿಕೊಂಡಿದ್ದಾಳೆ. ಪರೀಕ್ಷೆಯ ಸಮಯದಲ್ಲಿ ರಾತ್ರಿಯಿಡೀ ಎಚ್ಚರದಿಂದ ಇರಲು ಈ ಮಾತ್ರೆ ಸೇವಿಸುತ್ತಿದ್ದೆ ಎಂದಿದ್ದಾಳೆ. ಇದು ವೈದ್ಯರು ಹಾಗೂ ಪೋಷಕರನ್ನು ದಿಗ್ಭ್ರಮೆಗೊಳಿಸಿದೆ.

ಏನಿದು ನಿದ್ರೆ ತಡೆಯುವ ಮಾತ್ರೆ?: ಒಂದು ಮಾತ್ರೆ ಸೇವಿಸಿದರೆ ಸುಮಾರು 40 ಗಂಟೆಗಳ ಕಾಲ ಎಚ್ಚರದಿಂದ ಇರುವಂತೆ ಮಾಡುತ್ತದೆ. ಸಾಮಾನ್ಯವಾಗಿ ಈ ಮಾತ್ರೆಗಳನ್ನು ಉಗ್ರರು ತೆಗೆದುಕೊಳ್ಳುತ್ತಾರೆ. ಭಯೋತ್ಪಾದಕ ದಾಳಿ ವೇಳೆ ನಿದ್ರೆ ತಪ್ಪಿಸಲು ಉಗ್ರರು ಇಂತಹ ಮಾತ್ರೆಗಳನ್ನು ನುಂಗಿ ಕಾರ್ಯಾಚರಣೆ ಮಾಡುತ್ತಾರೆ. ಇದು ಮಾರುಕಟ್ಟೆಗಳಲ್ಲಿ ಸಿಗಲ್ಲ. ಆದರೆ ಕಳ್ಳ ಮಾರ್ಗದಲ್ಲಿ ಬೇರೆ ಬೇರೆ ಮಾತ್ರೆಗಳ ಹೆಸರಿನಲ್ಲಿ ಭಾರತಕ್ಕೆ ಸಾಗಿಸಲಾಗುತ್ತದೆ.

ಇದೀಗ ಈ ಮಾತ್ರೆಗಳನ್ನು ವಿದ್ಯಾರ್ಥಿಗಳು ಸೇವಿಸುತ್ತಿರುವುದು ಆತಂಕಕಾರಿಯಾಗಿದೆ. ಪರೀಕ್ಷೆಗಳ ಸಮಯಗಳಲ್ಲಿ ಇಂತಹ ಮಾತ್ರೆಗೆ ಬೇಡಿಕೆ ಕೂಡ ಹೆಚ್ಚಾಗುತ್ತದೆ ಎಂದು ಔಷಧ ವ್ಯಾಪಾರಿಗಳು ಹೇಳುತ್ತಾರೆ. 26/11 ಮುಂಬೈ ದಾಳಿ ವೇಳೆ ಮೊದಲ ಬಾರಿ ಈ ಮಾತ್ರೆಗಳು ಪತ್ತೆಯಾಗಿದ್ದವು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago