ಕಾರವಾರ: ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಂಡವು ಹೊನ್ನಾವರದ ನ್ಯಾಯಾಲಯಕ್ಕೆ ಸಲ್ಲಿಸಿರುವ ʼಬಿʼ ರಿಪೋರ್ಟ್ನ್ನು ಆಕ್ಷೇಪಿಸಿ ಮೇಸ್ತಾ ತಂದೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಪ್ರಕರಣದಲ್ಲಿ ಸಿಬಿಐ ತನಿಖಾ ತಂಡವು ಅಕ್ಟೋಬರ್ 6 ರಂದು ಹೊನ್ನಾವರದ ನ್ಯಾಯಾಲಯಕ್ಕೆ ʼಬಿʼ ರಿಪೋರ್ಟ್ ಸಲ್ಲಿಕೆ ಮಾಡಿತು. ಇದನ್ನು ಆಕ್ಷೇಪಿಸಿ ಪರೇಶ್ ಮೇಸ್ತಾ ತಂದೆ ಕಮಾಲಕ ಮೇಸ್ತಾ ಅವರು ಹೊನ್ನಾವರದ ಜೆಎಂಎಫ್ಸಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿ ಆಕ್ಷೇಪಣ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಕಳೆದ ಅಕ್ಟೋಬರ್ 6 ರಂದು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದ ಸಿಬಿಐ ತನಿಖಾ ತಂಡ, ಪರೇಶ್ ಮೇಸ್ತಾ ಕೊಲೆ ನಡೆದಿಲ್ಲ. ಅದು ಸಹಜ ಸಾವು. ಆರೋಪಿತರನ್ನು ದೋಷಮುಕ್ತ ಮಾಡಬಹುದೆಂದು ನ್ಯಾಯಾಲಯಕ್ಕೆ ವರದಿ ನೀಡಿತ್ತು.
ಬಿ ರಿಪೋರ್ಟ್ ಕುರಿತು ಆಕ್ಷೇಪಣೆ ಮಾಡಿದ್ದ ಪರೇಶ್ ಮೇಸ್ತಾ ತಂದೆ ಕಮಲಾಕರ ಮೇಸ್ತಾ, ತನ್ನ ಮಗನ ಸಾವು ಸಹಜವಾಗಿದ್ದಲ್ಲ. ಅವನನ್ನು ಕೊಲೆ ಮಾಡಿ, ಸಾಕ್ಷಿ ನಾಶ ಮಾಡಲಾಗಿದೆ ಎಂದು ಆರೋಪಿಸಿದ್ದರು.
ಕುಂದಾಪುರ: ಕಾಂಗ್ರೆಸ್ ಪಕ್ಷದ ಟಿಕೇಟ್ ಆಕಾಂಕ್ಷಿಯಾಗಿ ಅಶೋಕ್ ಪೂಜಾರಿ ಅರ್ಜಿ ಸಲ್ಲಿಕೆ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…