ಉತ್ತರ ಕನ್ನಡ: ಹೊನ್ನಾವರದಲ್ಲಿ ಅನುಮಾನಾಸ್ಪದವಾಗಿ ಸಾವನಪ್ಪಿದ ಪರೇಶ್ ಮೇಸ್ತಾ ಹತ್ಯೆಯ ತನಿಖಾ ವರದಿಯನ್ನು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಇದು ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು ಎಂದು ತಿಳಿಸಿದೆ.
2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಹೊನ್ನಾವರದ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಡಿಸೆಂಬರ್ 8ರಂದು ಹೊನ್ನಾವರ ನಗರದ ಶನಿ ದೇವಸ್ಥಾನದ ಹಿಂಭಾಗದ ಶಟ್ಟಿ ಕೆರೆಯಲ್ಲಿ ಪರೇಶ್ ಮೇಸ್ತಾ ಶವ ಪತ್ತೆಯಾಗಿತ್ತು. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು. ಅಷ್ಟೇ ಅಲ್ಲದೇ ಈತನನ್ನು ಹಿಂದೂ ಸಂಘಟನೆಗಳು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು.
ಬಂಟ್ವಾಳ : ಚಡ್ಡಿಗಳೆ ಎಚ್ಚರ ಪಿಎಫ್ಐ ನಾವು ಮರಳಿ ಬರುತ್ತೇವೆ : ರಸ್ತೆಯಲ್ಲಿ ಬೆದರಿಕೆ ಬರಹ – Vishwanews24
ಹೊನ್ನಾವರ ರಣರಂಗವಾಗುತ್ತಿದ್ದಂತೆ ಎಚ್ಚೆತ್ತ ಅಂದಿನ ಸಿದ್ದರಾಮಯ್ಯ ಸರ್ಕಾರ ಪರೇಶ್ ಮೇಸ್ತಾ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ನಂತರ ಘಟನೆಗೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಲಾಗಿತ್ತು. ನಾಲ್ಕೂವರೆ ವರ್ಷದ ನಂತರ ಸಿಬಿಐನಿಂದ ವರದಿ ಸಲ್ಲಿಸಿದೆ.
ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಪರೇಶ್ ಮೇಸ್ತ ಪ್ರಕರಣದಲ್ಲಿ ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಬಿಜೆಪಿಯು ಮಾನ ಮರ್ಯಾದೆ ಇದ್ದರೆ ಕ್ಷಮೆ ಕೋರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು’ ಎಂದಿದ್ದಾರೆ. ‘ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ’ ಎಂದಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…