ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್ ಲಾರಿಯೊಂದು ಪಲ್ಟಿಯಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಆತ್ರಾಡಿಯಿಂದ ಪೇಪರ್ ಬಾಕ್ಸ್ ಗಳನ್ನು ತುಂಬಿ ಹುಬ್ಬಳ್ಳಿ ಕಡೆ ಪ್ರಯಾಣ ಬೆಳೆಸಿದ್ದ ಲಾರಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಪರ್ಕಳದ ಈ ಪ್ರದೇಶದಲ್ಲಿ ಬೃಹತ್ ವಾಹನಗಳು ಕೆಟ್ಟು ನಿಲ್ಲುರುವುದು, ಅಪಘಾತಗಳು ನಡೆಯುತ್ತಿರುವುದು ಸರ್ವೇಸಾಮಾನ್ಯವಾಗಿದೆ.
ಲಾರಿಯಿಂದ ಡೀಸೆಲ್ ಸೋರಿಕೆಯಾಗಿದೆ. ತತ್ ಕ್ಷಣ ಕಾರ್ಯಾಚರಣೆ ನಡೆಸಿ ಲಾರಿಯನ್ನು ಮೇಲಕ್ಕೆತ್ತಲಾಗಿದೆ.ಯಾರೊಬ್ಬರಿಗೂ ಗಾಯವಾದ ಬಗ್ಗೆ ವರದಿಯಾಗಿಲ್ಲ. ಎರಡು ದಿನಗಳ ಹಿಂದಷ್ಟೇ ಏರು ರಸ್ತೆಯಲ್ಲಿ ಲಾರಿಯೊಂದು ಕೆಟ್ಟು ನಿಂತು ವಾಹನ ಸವಾರರು ಪರದಾಡಬೇಕಾಗಿತ್ತು.
ಸಾರ್ವಜನಿಕರ ಆಕ್ರೋಶ
ಜನಪ್ರತಿನಿಧಿಗಳು, ಜಿಲ್ಲಾಡಳಿತ ವಾಹನ ಚಾಲಕರಿಗೆ, ಮಾಲಕರಿಗಾಗುವ ನಷ್ಟವನ್ನು ಮನಗಂಡು ಶೀಘ್ರ ಹಳೆ ರಸ್ತೆಯನ್ನಾದರೂ ಅಭಿವೃದ್ಧಿಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ನಿರಂತರ ವಾಹನ ಚಾಲಕರಿಗೆ ನಷ್ಟವನ್ನು ಉಂಟು ಮಾಡುವ ರಸ್ತೆಗೆ ಪೂರ್ಣ ಪ್ರಮಾಣದ ಕಾಯಕಲ್ಪವಾಗಬೇಕು , ಮತ್ತು ಪದೇ ಪದೇ ಈ ರೀತಿ ವಾಹನ ಚಾಲಕರಿಗೆ ಮಾಲಕರಿಗೆ ಆಗುವ ನಷ್ಟ ಭರಿಸುವವರು ಯಾರು ಎಂದು ಅಳಲು ತೋಡಿಕೊಂಡಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…