Featured

ಪರ ಸ್ತ್ರೀ ಜೊತೆ ಸಲುಗೆ : ಪತಿಯ ಎರಡು ಕಾಲು ಮುರಿಯಲು 5 ಲಕ್ಷಕ್ಕೆ  ಸುಪಾರಿ ನೀಡಿದ ಪತ್ನಿ – vishwanews24

ಪರ ಸ್ತ್ರೀ ಜೊತೆ ಸಲುಗೆ – ಪತಿಯ ಕಾಲು ಮುರಿಯಲು 5 ಲಕ್ಷಕ್ಕೆ ಪತ್ನಿಯಿಂದಲೇ ಸುಪಾರಿ

ಕಲಬುರಗಿ: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ  ನಗರದ ಅತ್ತರ ಕಂಪೌಡ್ ಬಳಿ ನಡೆದಿದೆ.

ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿಯಾಗಿದ್ದು, ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಹಂತಕರಾದ ಆರೀಫ್, ಮನಹೋರ, ಸುನೀಲ್ ರನ್ನ ಪೊಲೀಸರು ಬಂಧಿಸಿದ್ದಾರೆ.

ವೆಂಕಟೇಶ್ ಕೆಲ ತಿಂಗಳಿನಿಂದ ಮತ್ತೊಬ್ಬ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ, ಹೀಗಾಗಿ ದಂಪತಿಗಳ ನಡುವೆ ಹಲವು ಬಾರಿ ಜಗಳವಾಗಿತ್ತು. ಕೊನೆಗೆ ಮಾತು ಕೇಳದ ಪತಿಯ ಎರಡೂ ಕಾಲುಗಳನ್ನ ಮುರಿದ್ರೆ ಮನೆಯಲ್ಲಿಯೇ ಬಿದ್ದಿರುತ್ತಾನೆ ಅಂತ ಪತ್ನಿ ಸ್ಕೆಚ್‌ ಹಾಕಿದ್ದಾಳೆ.

ಪತಿಯ ಎರಡೂ ಕಾಲುಗಳನ್ನ ಮುರಿಯಲು 5 ಲಕ್ಷಕ್ಕೆ ಪತ್ನಿ ಸುಪಾರಿ ನೀಡಿದ್ದಳು. ಆದ್ರೆ ವೆಂಕಟೇಶ್‌ ಮಗ ಇದು ದರೋಡೆ ಪ್ರಕರಣದ ವೇಳೆ ಕಾಲು ಮುರಿತ ಎಂದು ದೂರು ನೀಡಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾಗ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಕಾಲು ಮುರಿದ ಆರೋಪಿಗಳನ್ನ ಬ್ರಹ್ಮಪೂರ ಪೊಲೀಸರು ಬಂಧಿಸಿದ್ದಾರೆ.

Vishwa News 24

Recent Posts

ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ      ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…

6 minutes ago

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

18 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

19 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

19 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

19 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

19 hours ago