ಕಲಬುರಗಿ: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದ ಅತ್ತರ ಕಂಪೌಡ್ ಬಳಿ ನಡೆದಿದೆ.
ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿಯಾಗಿದ್ದು, ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಹಂತಕರಾದ ಆರೀಫ್, ಮನಹೋರ, ಸುನೀಲ್ ರನ್ನ ಪೊಲೀಸರು ಬಂಧಿಸಿದ್ದಾರೆ.
ವೆಂಕಟೇಶ್ ಕೆಲ ತಿಂಗಳಿನಿಂದ ಮತ್ತೊಬ್ಬ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ, ಹೀಗಾಗಿ ದಂಪತಿಗಳ ನಡುವೆ ಹಲವು ಬಾರಿ ಜಗಳವಾಗಿತ್ತು. ಕೊನೆಗೆ ಮಾತು ಕೇಳದ ಪತಿಯ ಎರಡೂ ಕಾಲುಗಳನ್ನ ಮುರಿದ್ರೆ ಮನೆಯಲ್ಲಿಯೇ ಬಿದ್ದಿರುತ್ತಾನೆ ಅಂತ ಪತ್ನಿ ಸ್ಕೆಚ್ ಹಾಕಿದ್ದಾಳೆ.
ಪತಿಯ ಎರಡೂ ಕಾಲುಗಳನ್ನ ಮುರಿಯಲು 5 ಲಕ್ಷಕ್ಕೆ ಪತ್ನಿ ಸುಪಾರಿ ನೀಡಿದ್ದಳು. ಆದ್ರೆ ವೆಂಕಟೇಶ್ ಮಗ ಇದು ದರೋಡೆ ಪ್ರಕರಣದ ವೇಳೆ ಕಾಲು ಮುರಿತ ಎಂದು ದೂರು ನೀಡಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾಗ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಕಾಲು ಮುರಿದ ಆರೋಪಿಗಳನ್ನ ಬ್ರಹ್ಮಪೂರ ಪೊಲೀಸರು ಬಂಧಿಸಿದ್ದಾರೆ.
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…