Featured

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು – ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ

ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ ಪೊಲೀಸರು ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯ ಮಹತ್ವದ ಆದೇಶ ನೀಡಿದ್ದು, ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಗೌಹಾಟಿ ಹೈಕೋರ್ಟ್ ನೀಡಿದ್ದ ಹಿಂದಿನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎ. ಎಸ್. ಚಂದೂರ್ಕರ್ ಅವರಿದ್ದ ಪೀಠವು ಈ ತೀರ್ಪು ಪ್ರಕಟಿಸಿದ್ದು, ಪ್ರಕರಣದ ಸಂದರ್ಭಗಳನ್ನು ಪರಿಗಣಿಸಿದಾಗ ಇದು ರಾಜಕೀಯ ದ್ವೇಷದಂತೆ ಕಾಣುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಇಂತಹ ಸಂದರ್ಭಗಳಲ್ಲಿ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸುವುದು ಅತ್ಯಗತ್ಯ ಎಂದು ನ್ಯಾಯಾಲಯ ಹೇಳಿದೆ. ಈ ತೀರ್ಪಿನಿಂದ ಖೇರಾ ಅವರ ಬಂಧನಕ್ಕೆ ತಾತ್ಕಾಲಿಕ ತಡೆ ದೊರೆತಿದೆ.

ಇದನ್ನೂ ಓದಿ:

ಈ ಪ್ರಕರಣಕ್ಕೆ ಕಾರಣವಾಗಿದ್ದು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧ ಖೇರಾ ಮಾಡಿದ್ದ ಆರೋಪಗಳು. ವಿದೇಶಗಳಲ್ಲಿ ಅನೇಕ ಪಾಸ್‌ಪೋರ್ಟ್‌ಗಳು ಮತ್ತು ಅಮೆರಿಕದಲ್ಲಿ ಬಹಿರಂಗಪಡಿಸದ ಆಸ್ತಿಗಳಿವೆ ಎಂದು ಖೇರಾ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅವರ ವಿರುದ್ಧ ಮಾನನಷ್ಟ, ನಕಲಿ ದಾಖಲೆ ಸೃಷ್ಟಿ ಹಾಗೂ ಕ್ರಿಮಿನಲ್ ಪಿತೂರಿಯ ಆರೋಪಗಳಡಿ ಎಫ್‌ಐಆರ್ ದಾಖಲಿಸಲಾಗಿತ್ತು.

ಪ್ರಕರಣದ ವಿಚಾರಣೆಯಲ್ಲಿ ಈಗಾಗಲೇ ಹಲವು ತಿರುವುಗಳು ಕಂಡುಬಂದಿವೆ. ಏಪ್ರಿಲ್ 10ರಂದು ತೆಲಂಗಾಣ ಹೈಕೋರ್ಟ್ ಖೇರಾ ಅವರಿಗೆ ಒಂದು ವಾರದ ಸಾರಿಗೆ ಜಾಮೀನು ನೀಡಿತ್ತು. ಬಳಿಕ ಅಸ್ಸಾಂ ಸರ್ಕಾರ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಆ ಆದೇಶಕ್ಕೆ ತಡೆ ನೀಡಿ, ಗುವಾಹಟಿ ಹೈಕೋರ್ಟ್ ಸಂಪರ್ಕಿಸಲು ಸೂಚಿಸಿತ್ತು.

ಇದನ್ನೂ ಓದಿ:

ಮುಂದೆ ಏಪ್ರಿಲ್ 24ರಂದು ಗುವಾಹಟಿ ಹೈಕೋರ್ಟ್ ಖೇರಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಮುಗ್ಧ ಮಹಿಳೆಯನ್ನು ರಾಜಕೀಯ ವಿವಾದಕ್ಕೆ ಎಳೆದಿದ್ದು, ಆರೋಪಗಳನ್ನು ಸಾಬೀತುಪಡಿಸಲು ವಿಫಲರಾಗಿದ್ದೀರಿ ಎಂದು ಕೋರ್ಟ್ ಟೀಕಿಸಿತ್ತು.

ಈ ತೀರ್ಪಿನ ವಿರುದ್ಧ ಖೇರಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ತಮ್ಮ ಹೇಳಿಕೆಗಳು ರಾಜಕೀಯ ವಾಕ್ಚಾತುರ್ಯದ ಭಾಗವಾಗಿದ್ದು, ದೂರು ರಾಜಕೀಯ ದ್ವೇಷದಿಂದ ಪ್ರೇರಿತವಾಗಿದೆ ಎಂದು ವಾದಿಸಿದ್ದರು. ಈ ವಾದವನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಅವರಿಗೆ ರಕ್ಷಣೆಯನ್ನು ನೀಡಿದೆ.

ಸದ್ಯ ಸುಪ್ರೀಂ ಕೋರ್ಟ್‌ನ ಈ ಆದೇಶವು ಪವನ್ ಖೇರಾಗೆ ಮಹತ್ವದ ಸಮಾಧಾನ ತಂದಿದ್ದು, ಅಸ್ಸಾಂ ಪೊಲೀಸರ ಬಂಧನದ ಭೀತಿಯಿಂದ ಅವರಿಗೆ ತಾತ್ಕಾಲಿಕ ಮುಕ್ತಿ ಸಿಕ್ಕಂತಾಗಿದೆ.

ಇದನ್ನೂ ಓದಿ:

Vishwa News 24

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

14 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

18 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

26 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

54 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

1 hour ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

1 hour ago