Featured

ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದ ಡಿಸಿಎಂ ಡಾ. ಸಿ. ಎನ್‌. ಅಶ್ವತ್ಥನಾರಾಯಣ -Vishwanews24

ನನ್ನ ಜೀವನದಲ್ಲಿಯೇ ಇದೊಂದು ಅವಿಸ್ಮರಣೀಯ ದಿನ..

ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದ ಡಿಸಿಎಂ ಡಾ. ಸಿ. ಎನ್‌. ಅಶ್ವತ್ಥನಾರಾಯಣ -Vishwanews24

ಶಬರಿಮಲೆ: ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರು ಮಂಗಳವಾರ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿಕೊಂಡರು.

ನಿನ್ನೆ ಸಂಜೆ 5.50ಕ್ಕೆ ಸರಿಯಾಗಿ ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ, 6.55 ಗಂಟೆಗೆ ಸನ್ನಿಧಾನ ಸೇರಿಕೊಂಡರು. ಅದೇ ವೇಳೆಯಲ್ಲಿ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿಯಾದ ಅವರು ತದ ನಂತರ ಸ್ವಾಮಿಯ ದರ್ಶನ ಪಡೆದುಕೊಂಡರು.

ಇದನ್ನೂ ಓದಿ :ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ಬ್ರೇಕ್ : ರಾಜ್ಯ ವಕ್ಫ್ ಮಂಡಳಿ ಸುತ್ತೋಲೆ -Vishwanews24

ಈ ಸಂದರ್ಭದಲ್ಲಿ ದೇಗುಲದ ಮುಖ್ಯ ತಂತ್ರಿ ರಾಜೀವ ಕಂದರಾರು ಹಾಗೂ ಮೇಲ್‍ಶಾಂತಿ ಅವರಾದ ವಿ.ಕೆ.ಜಯರಾಜ್ ಪೋಟ್ರಿ ಅವರು ಡಿಸಿಎಂ ಅವರಿಗಾಗಿ ಪೂಜೆ ನೆರವೇರಿಸಿಕೊಟ್ಟು ಪವಿತ್ರವಾದ ಎಲೆ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಡಿಸಿಎಂ ಅವರು ಸ್ವಾಮಿಯ ಸನ್ನಿಧಾನದ ಸ್ವರ್ಣ ಮೆಟ್ಟಿಲು ಮುಂದೆ ನಿಂತು ಇರುಮುಡಿ ಸಮರ್ಪಿಸಿದರು.

ಬೆಳಗ್ಗೆಯೇ ಕೇರಳದ ಪಟ್ಟಾನಂತಿಟ್ಟ ನಗರಕ್ಕೆ ಬಂದ ಅವರು, ಅಲ್ಲಿಂದ ನೇರವಾಗಿ ಶಬರಿಮಲೆಗೆ ತರಳುವ ಮಾರ್ಗಮಧ್ಯೆ ಪಂದಳಮ್ ಅರಮನೆಗೆ ಭೇಟಿ ನೀಡಿದರು. ಅಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಅವರ ಸಾಕುತಂದೆ ಮಹಾರಾಜ ಶ್ರೀ ರಾಜಶೇಖರ ಪೆರುಮಾಳ್ ಅವರ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ರಾಜ ಕುಟುಂಬದ 102 ವರ್ಷದ ಹಿರಿಯ ಅಜ್ಜಿ ಮಾಕಮ್ಮನಾಳ್ ತನ್ವಾಂಗಿ ತಂಪುರುಟ್ಟೈ ಅವರಿಂದಲೂ ಆಶೀರ್ವಾದ ಪಡೆದರು.

ಇದನ್ನೂ ಓದಿ : ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡಲ್ಲ : ಸಚಿವ ಡಾ.ಕೆ. ಸುಧಾಕರ್ – Vishwanews24

ಬಳಿಕ ಮಕರವಿಳಕ್ಕು ಸಮಯದಲ್ಲಿ ಸ್ವಾಮಿ ಅಯ್ಯಪ್ಪಗೆ ಅಲಂಕಾರ ಮಾಡುವ ತಿರುವಾಭರಣಗಳ ಸ್ಟ್ರಾಂಗ್ ರೂಮ್ ಕೂಡ ಇದೇ ಅರಮನೆಯಲ್ಲಿದ್ದು, ಡಿಸಿಎಂ ಅವರು ಅಲ್ಲಿಗೂ ಭೇಟಿ ನೀಡಿ ನಮಸ್ಕರಿಸಿದರು. ರಾಜ ವಂಶಕ್ಕೆ ಸೇರಿದ 400 ಜನರು ಇಲ್ಲಿದ್ದು, ಕುಟುಂಬಸ್ಥರ ಜತೆ ಡಿಸಿಎಂ ಅವರು ಅನೌಪಚಾರಿಕ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ನನ್ನ ಜೀವನದಲ್ಲಿಯೇ ಇದೊಂದು ಅವಿಸ್ಮರಣೀಯ ದಿನ. ಸ್ವಾಮಿ ಅಯ್ಯಪ್ಪ ಅವರು ಆಡಿಬೆಳೆದ ಜಾಗವನ್ನು ಸಂದರ್ಶಿಸುವ ಭಾಗ್ಯ ನನ್ನದಾಗಿದೆ ಎಂದರು.

ಇದನ್ನೂ ಓದಿ : ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಪ್ರಕರಣ : ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ನಾಪತ್ತೆ! Vishwanews24

 

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

29 minutes ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

59 minutes ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

1 hour ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

1 hour ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

2 hours ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

2 hours ago