Featured

ಪವಿತ್ರ ಸ್ನಾನ, ಪೂಜೆ ಬಳಿಕ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟಿಸಿದ ಪ್ರಧಾನಿ ಮೋದಿ – Vishwanews24

ಪವಿತ್ರ ಸ್ನಾನ, ಪೂಜೆ ಬಳಿಕ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟಿಸಿದ ಪ್ರಧಾನಿ ಮೋದಿ – Vishwanews24

ಲಕ್ನೋ: ಗಂಗಾನದಿಗೆ ಸಂಪರ್ಕ ಕಲ್ಪಿಸುವ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ವಾರಣಾಸಿಯ ಕೇಂದ್ರ ಭಾಗದಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ನಿರ್ಮಾಣ ಮಾಡಲಾಗಿದೆ. ಈ ಯೋಜನೆಯಿಂದಾಗಿ ಪ್ರವಾಸೋದ್ಯಮ ಚೇತರಿಕೆ ಕಾಣಲಿದೆ.

ಕಾಶಿ ವಿಶ್ವನಾಥ್ ಕಾರಿಡಾರ್‍ನ್ನು ಉದ್ಘಾಟಿಸಿ ಮಾತನಾಡಿದ ನರೇಂದ್ರ ಮೋದಿ ಅವರು, ಇದೊಂದು ಐತಿಹಾಸಿಕ ಕ್ಷಣವಾಗಿದೆ. ದೇಶದ ಇತಿಹಾಸದಲ್ಲೇ ದೊಡ್ಡ ದಿನವಾಗಿದೆ. ಈ ಕ್ಷಣಕ್ಕೆ ಸಾಕ್ಷಿಯಾಗಿದ್ದು ನಮ್ಮ ಪುಣ್ಯವಾಗಿದೆ. ಮುಕ್ಕಾಲು ಕೋಟಿ ದೇವರು ಕಾಶಿಯಲ್ಲಿ ಇದ್ದಾರೆ. ಕಾಲಭೈರವನ ದರ್ಶನ ಪಡೆದು ಬಂದಿದ್ದೇನೆ. ಕಾಶಿಯ ದರ್ಶನದಿಂದ ಸಕಲ ಸಂಕಷ್ಟ ದೂರವಾಗುತ್ತದೆ. ಈ ಕಾರ್ಯಕ್ರಮವು ನನಗೆ ಸಂತೋಷವನ್ನು ತಂದಿದೆ ಎಂದರು.

ಕಣ್ಮರೆಯಾಗಿರುವ ಮಂದಿರಗಳನ್ನು ಮರುಸ್ಥಾಪನೆ ಮಾಡಿದ್ದೇವೆ. ಕಾಶಿ ನಮ್ಮ ಆದ್ಯಾತ್ಮಿಕತೆಯ ಪ್ರತೀಕವಾಗಿದೆ. ಪರಂಪರೆ ಪ್ರೇರಣೆಯಾಗುತ್ತದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಈ ಪರಿಸರದಲ್ಲಿ ದೈವಿಕ ವಾತಾವರಣದೆ. ಪ್ರಾಚಿನ ಕಾಶಿಗೆ ಆಧುನಿಕ ಸ್ಪರ್ಶ ಸಿಕ್ಕಿದೆ. ಇಂದು ಶಿವನ ಪ್ರಿಯ ವಾರವಾಗಿದ್ದು, ಇಂದೇ ಕಾರಿಡಾರ್ ಲೋಕಾರ್ಪಣೆಗೊಂಡಿದೆ. ತಾಯಿ ಗಂಗೆ, ಕಾಶಿ ವಿಶ್ವನಾಥ ಎಲ್ಲರಿಗೂ ಸೇರಿದವರು ಎಂದರು.

ಕಾಶಿ ವಿಶ್ವನಾಥನ ಕ್ಷೇತ್ರಕ್ಕೆ ಹೊಸ ರೂಪ ನೀಡುವ 399 ಕೋಟಿ ರೂ. ಮೊದಲ ಹಂತದ ಕಾಶಿ ಕಾರಿಡಾರ್ ನ್ನು ಮೋದಿ ಉದ್ಘಾಟಿಸಿದ್ದಾರೆ. ಇದಕ್ಕೂ ಮೊದಲು ಪ್ರಧಾನಿ ಮೋದಿಯವರು ಕಾಲ ಭೈರವೇಶ್ವರನ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು. ಪೂಜೆ ಬಳಿಕ ಅಲಕಾನಂದ ಕ್ರೂಸ್‍ನಲ್ಲಿ ಲಲಿತಾ ಘಾಟ್‍ಗೆ ತೆರಳಿ ಅಲ್ಲಿ ಕಾವಿಧಾರಿಯಾಗಿ ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಅಲ್ಲಿ ಅಘ್ರ್ಯ ಅರ್ಪಿಸಿ ರುದ್ರಾಕ್ಷಿ ಮಾಲೆ ಹಿಡಿದು ಜಪ ಮಾಡಿದರು.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

16 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

16 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

16 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

16 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

20 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

20 hours ago