ಲಕ್ನೋ: ಗಂಗಾನದಿಗೆ ಸಂಪರ್ಕ ಕಲ್ಪಿಸುವ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ವಾರಣಾಸಿಯ ಕೇಂದ್ರ ಭಾಗದಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ನಿರ್ಮಾಣ ಮಾಡಲಾಗಿದೆ. ಈ ಯೋಜನೆಯಿಂದಾಗಿ ಪ್ರವಾಸೋದ್ಯಮ ಚೇತರಿಕೆ ಕಾಣಲಿದೆ.
ಕಾಶಿ ವಿಶ್ವನಾಥ್ ಕಾರಿಡಾರ್ನ್ನು ಉದ್ಘಾಟಿಸಿ ಮಾತನಾಡಿದ ನರೇಂದ್ರ ಮೋದಿ ಅವರು, ಇದೊಂದು ಐತಿಹಾಸಿಕ ಕ್ಷಣವಾಗಿದೆ. ದೇಶದ ಇತಿಹಾಸದಲ್ಲೇ ದೊಡ್ಡ ದಿನವಾಗಿದೆ. ಈ ಕ್ಷಣಕ್ಕೆ ಸಾಕ್ಷಿಯಾಗಿದ್ದು ನಮ್ಮ ಪುಣ್ಯವಾಗಿದೆ. ಮುಕ್ಕಾಲು ಕೋಟಿ ದೇವರು ಕಾಶಿಯಲ್ಲಿ ಇದ್ದಾರೆ. ಕಾಲಭೈರವನ ದರ್ಶನ ಪಡೆದು ಬಂದಿದ್ದೇನೆ. ಕಾಶಿಯ ದರ್ಶನದಿಂದ ಸಕಲ ಸಂಕಷ್ಟ ದೂರವಾಗುತ್ತದೆ. ಈ ಕಾರ್ಯಕ್ರಮವು ನನಗೆ ಸಂತೋಷವನ್ನು ತಂದಿದೆ ಎಂದರು.
ಕಣ್ಮರೆಯಾಗಿರುವ ಮಂದಿರಗಳನ್ನು ಮರುಸ್ಥಾಪನೆ ಮಾಡಿದ್ದೇವೆ. ಕಾಶಿ ನಮ್ಮ ಆದ್ಯಾತ್ಮಿಕತೆಯ ಪ್ರತೀಕವಾಗಿದೆ. ಪರಂಪರೆ ಪ್ರೇರಣೆಯಾಗುತ್ತದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಈ ಪರಿಸರದಲ್ಲಿ ದೈವಿಕ ವಾತಾವರಣದೆ. ಪ್ರಾಚಿನ ಕಾಶಿಗೆ ಆಧುನಿಕ ಸ್ಪರ್ಶ ಸಿಕ್ಕಿದೆ. ಇಂದು ಶಿವನ ಪ್ರಿಯ ವಾರವಾಗಿದ್ದು, ಇಂದೇ ಕಾರಿಡಾರ್ ಲೋಕಾರ್ಪಣೆಗೊಂಡಿದೆ. ತಾಯಿ ಗಂಗೆ, ಕಾಶಿ ವಿಶ್ವನಾಥ ಎಲ್ಲರಿಗೂ ಸೇರಿದವರು ಎಂದರು.
ಕಾಶಿ ವಿಶ್ವನಾಥನ ಕ್ಷೇತ್ರಕ್ಕೆ ಹೊಸ ರೂಪ ನೀಡುವ 399 ಕೋಟಿ ರೂ. ಮೊದಲ ಹಂತದ ಕಾಶಿ ಕಾರಿಡಾರ್ ನ್ನು ಮೋದಿ ಉದ್ಘಾಟಿಸಿದ್ದಾರೆ. ಇದಕ್ಕೂ ಮೊದಲು ಪ್ರಧಾನಿ ಮೋದಿಯವರು ಕಾಲ ಭೈರವೇಶ್ವರನ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು. ಪೂಜೆ ಬಳಿಕ ಅಲಕಾನಂದ ಕ್ರೂಸ್ನಲ್ಲಿ ಲಲಿತಾ ಘಾಟ್ಗೆ ತೆರಳಿ ಅಲ್ಲಿ ಕಾವಿಧಾರಿಯಾಗಿ ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಅಲ್ಲಿ ಅಘ್ರ್ಯ ಅರ್ಪಿಸಿ ರುದ್ರಾಕ್ಷಿ ಮಾಲೆ ಹಿಡಿದು ಜಪ ಮಾಡಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…