Featured

ಪವಿತ್ರ ಹಜ್ ಯಾತ್ರೆಗೆ ನೀಡುವ ಸಬ್ಸಿಡಿ ರದ್ದು ಮಾಡಿದ ಪಾಕಿಸ್ತಾನ ಸರಕಾರ – Vishwanews24

ಇಸ್ಲಾಮಾಬಾದ್ಪವಿತ್ರ ಕ್ಷೇತ್ರ ಮೆಕ್ಕಾ ಮತ್ತು ಮದೀನಾಕ್ಕೆ ಹಜ್ ಯಾತ್ರೆ ಕೈಗೊಳ್ಳುವವರಿಗೆ ನೀಡುತ್ತಿದ್ದ ಸಬ್ಸಿಡಿಯನ್ನು ಪಾಕಿಸ್ತಾನ ಸರ್ಕಾರ ರದ್ದು ಮಾಡಿದೆ.

ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ವಾರ್ಷಿಕವಾಗಿ 450 ಕೋಟಿ ಪಾಕ್ ರೂಪಾಯಿಗಳು ಉಳಿತಾಯವಾಗಲಿದೆ.

ಪಾಕಿಸ್ತಾನದ ಆರ್ಥಿಕ ಸ್ಥಿತಿ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಜ್ ಯಾತ್ರಿಗಳಿಗೆ ಸಬ್ಸಿಡಿ ನೀಡುವುದಕ್ಕೆ ಇಸ್ಲಾಂನಲ್ಲಿ ಅವಕಾಶ ಇದೆಯೆ ಅಥವಾ ಇಲ್ಲವೆ ಎಂಬ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು ಎಂದು ಧಾರ್ವಿುಕ ಸಚಿವ ನೂರುಲ್ ಹಕ್ ಖಾದ್ರಿ ತಿಳಿಸಿದ್ದಾರೆ. ಹಿಂದೆ ಅಧಿಕಾರದಲ್ಲಿದ್ದ ಪಿಎಂಎಲ್-ಎನ್ ಪಕ್ಷ ಸರ್ಕಾರಿ ಕೋಟಾದಲ್ಲಿ ಹಜ್ ಯಾತ್ರೆ ಕೈಗೊಳ್ಳುವವರಿಗೆ 42 ಸಾವಿರ ರೂ. ಸಬ್ಸಿಡಿ ನೀಡುತ್ತಿತ್ತು.

ಇಸ್ಲಾಂ ಧರ್ಮದಲ್ಲಿ ಪ್ರತಿಯೊಬ್ಬರೂ ನಿಭಾಯಿಸಬೇಕಾದ ಐದು ಪ್ರಮುಖ ಕರ್ತವ್ಯಗಳ ಪೈಕಿ ಹಜ್ ಯಾತ್ರೆ ಕೂಡ ಒಂದು. ಇಸ್ಲಾಂನ ಪ್ರಮುಖ ಸ್ತಂಭಗಳಲ್ಲಿ ಹಜ್ ಯಾತ್ರೆಗೆ ಸ್ಥಾನ ನೀಡಲಾಗಿದೆ. ಪ್ರತಿಯೊಬ್ಬ ಮುಸಲ್ಮಾನ ನಮಾಜ್ ಮತ್ತು ರೋಜಾವನ್ನು ಕಡ್ಡಾಯವಾಗಿ ಕೈಗೊಳ್ಳುವಂತೆಯೇ ಜೀವನದಲ್ಲಿ ಒಮ್ಮೆಯಾದರೂ ಹಜ್ ಯಾತ್ರೆಯನ್ನು ಕೈಗೊಳ್ಳಬೇಕು. ಪ್ರಯಾಣ, ವಸತಿ, ಆಹಾರದ ಖರ್ಚನ್ನು ಯಾತ್ರಿಕರು ಸ್ವಂತವಾಗಿ ಭರಿಸಬೇಕು ಎಂಬ ಉಲ್ಲೇಖ ಕುರಾನ್​ನಲ್ಲಿ ಇದೆ ಎಂಬುದು ಇಸ್ಲಾಂ ಧಾರ್ವಿುಕ ಮುಖಂಡರ ಅಭಿಪ್ರಾಯ.

Vishwa News 24

Recent Posts

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ.ಕೆ ಭಟ್ ನಿಧನ – vishwanews24

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…

12 minutes ago

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ – vishwanews24

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…

18 minutes ago

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ – vishwanews24

ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…

27 minutes ago

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

1 hour ago

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು – vishwanews24

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…

1 hour ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago