ಹುಬ್ಬಳ್ಳಿ: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ( ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಎಸ್.ವಿ. ಸಂಕನೂರ ಅವರಿಗೆ ನೀಡಲಾಗಿದೆ, ಇದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್ , ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದು, ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕೇಳಿಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ನನ್ನನ್ನು ಕಡೆಗಣಿಸಿ ಎಸ್.ವಿ.ಸಂಕನೂರು ಅವರಿಗೆ ಟಿಕೆಟ್ ನೀಡಿದ್ದರಿಂದ ನೋವಾಗಿದೆ. ಹೀಗಾಗಿ, ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ಬಿಡುಗಡೆಗೊಳಿಸಿ ಎಂದು ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದರು.
ಇದನ್ನೂ ಒದಿ:
ಬಿಜೆಪಿಯಲ್ಲಿ ನಿಷ್ಠಾವಂತ, ಪ್ರಾಮಾಣಿಕ ಕಾರ್ಯಕರ್ತರಿಗೆ ಬೆಲೆಯಿಲ್ಲ ಎನ್ನುವುದು ದೃಢವಾಗಿದೆ. ಬಿಜೆಪಿಯಿಂದ ನನಗೆ ಅನ್ಯಾಯವಾಗಿದೆ. ಈ ಮೂಲಕ ಕಾರ್ಯಕರ್ತರಿಗೆ ಅನ್ಯಾಯ ಮಾಡಿದಂತಾಗಿದೆ. 37 ವರ್ಷಗಳ ಕಾಲ ಪಕ್ಷಕ್ಕೆ ದುಡಿದಿದ್ದೇನೆ. ಇದನ್ನು ಗುರುತಿಸದೇ ಪಕ್ಷ ಹೊರಗಿನಿಂದ ಬಂದವರಿಗೆ ಮಣೆ ಹಾಕಿ ಟಿಕೆಟ್ ನೀಡಿದ್ದು, ಸಾಕಷ್ಟು ನೋವು ತರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಈಗಲೂ ಕಾಲ ಮಿಂಚಿಲ್ಲ. ನನಗೆ ಟಿಕೆಟ್ ಸಿಗುವ ಭರವಸೆ ಇದ್ದು, ಎಂಟು ದಿನಗಳವರೆಗೆ ಕಾದು ನೋಡುತ್ತೇನೆ. ಅವಕಾಶ ಸಿಗದಿದ್ದರೆ ಬೇರೆ ನಿರ್ಧಾರ ತೆಗೆದುಕೊಳ್ಳುತ್ತೇನೆ. ಸದ್ಯಕ್ಕೆ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ಬಿಡುಗಡೆಗೊಳಿಸುವಂತೆ ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ ಎಂದು ಹೇಳಿದರು. ಈ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ.
ಇದನ್ನೂ ಒದಿ:
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…