ಕೋಲ್ಕತ್ತಾ : ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮುಸ್ಲಿಂ ಮಕ್ಕಳಿಗೆ ಪ್ರತ್ಯೇಕ ಊಟದ ರೂಮ್ ನಿರ್ಮಿಸಲು ಸುತ್ತೋಲೆಯನ್ನು ಹೊರಡಿಸಿದ್ದು, ವಿವಾದಕ್ಕೆ ಕಾರಣವಾಗಿದೆ.
ಕೂಚ್ ಬಿಹಾರ್ ಜಿಲ್ಲೆಯ ಶಾಲೆಗಳಲ್ಲಿ ಶೇ.70 ಕ್ಕಿಂತ ಹೆಚ್ಚು ಮುಸ್ಲಿಂ ಮಕ್ಕಳೇ ಇದ್ದಾರೆ. ಇಲ್ಲಿ ಮಧ್ಯಾಹ್ನದ ಊಟಕ್ಕೆ ಪ್ರತ್ಯಕ ಊಟದ ಹಾಲ್ ಗಳನ್ನು ನಿರ್ಮಿಸಬೇಕೆಂದು ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. ಈ ಆದೇಶವನ್ನು ಜಾರಿ ಮಾಡಲು ಪಶ್ಚಿಮ ಬಂಗಾಳದ ಅಲ್ಪಸಂಖ್ಯಾತ ವ್ಯವಹಾರ ಮತ್ತು ಮದರಸಾ ಶಿಕ್ಷಣ ಇಲಾಖೆ ಶೇ. 70 ಕ್ಕಿಂತ ಹೆಚ್ಚು ಮುಸ್ಲಿಂ ಮಕ್ಕಳು ಇರುವ ಶಾಲೆಗಳ ಪಟ್ಟಿಯನ್ನು ಸಿದ್ದಮಾಡಿದೆ ಎನ್ನಲಾಗಿದೆ.
ಈ ಆದೇಶವನ್ನು ಜಾರಿ ಮಾಡಲು ಪಶ್ಚಿಮ ಬಂಗಾಳದ ಅಲ್ಪಸಂಖ್ಯಾತ ವ್ಯವಹಾರ ಮತ್ತು ಮದರಸಾ ಶಿಕ್ಷಣ ಇಲಾಖೆ ಶೇ. 70ಕ್ಕಿಂತ ಹೆಚ್ಚು ಮುಸ್ಲಿಂ ಮಕ್ಕಳು ಇರುವ ಶಾಲೆಗಳ ಪಟ್ಟಿಯನ್ನು ಸಿದ್ಧ ಮಾಡಿದೆ ಎಂದು ಹೇಳಲಾಗಿದೆ. ಶಿಕ್ಷಣ ಸಂಸ್ಥೆಯಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶೇಕಡವಾರು ಪ್ರಮಾಣವನ್ನು ನಮೂದಿಸಿರುವ ಮಾಹಿತಿಯೊಂದಿಗೆ ಸರ್ಕಾರಿ ಮತ್ತು ಸರ್ಕಾರಿ ಅನಿದಾನಿತ ಶಾಲೆಗಳ ಪಟ್ಟಿಯನ್ನು ಸಂಗ್ರಹ ಮಾಡಲು ಜಿಲ್ಲಾ ಶಿಕ್ಷಣಾಧಿಕಾರಿಗೆ ಸುತ್ತೋಲೆ ಕಳುಹಿಸಲಾಗಿದೆ.
ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ಜಾರಿ ಆಗಿರುವ ಸುತ್ತೋಲೆಯ ಬಗ್ಗೆ ಗೊತ್ತಿಲ್ಲ. ಈ ಸಂಬಂಧ ತನಿಖೆ ಮಾಡಿಸಲಾಗುತ್ತಿದ್ದು, ಆದೇಶವನ್ನು ಹಿಂಪಡೆಯಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹೆಚ್ಚಿರುವ ಕಡೆಗಳಲ್ಲಿ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಲು ತಾಂತ್ರಿಕವಾಗಿ ಈ ರೀತಿಯ ಮಾಹಿತಿಯನ್ನು ಕೇಳಿರಬಹುದು. ಎಂದು ಹೇಳಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…