ಕೋಲ್ಕತ್ತಾ : ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮುಸ್ಲಿಂ ಮಕ್ಕಳಿಗೆ ಪ್ರತ್ಯೇಕ ಊಟದ ರೂಮ್ ನಿರ್ಮಿಸಲು ಸುತ್ತೋಲೆಯನ್ನು ಹೊರಡಿಸಿದ್ದು, ವಿವಾದಕ್ಕೆ ಕಾರಣವಾಗಿದೆ.
ಕೂಚ್ ಬಿಹಾರ್ ಜಿಲ್ಲೆಯ ಶಾಲೆಗಳಲ್ಲಿ ಶೇ.70 ಕ್ಕಿಂತ ಹೆಚ್ಚು ಮುಸ್ಲಿಂ ಮಕ್ಕಳೇ ಇದ್ದಾರೆ. ಇಲ್ಲಿ ಮಧ್ಯಾಹ್ನದ ಊಟಕ್ಕೆ ಪ್ರತ್ಯಕ ಊಟದ ಹಾಲ್ ಗಳನ್ನು ನಿರ್ಮಿಸಬೇಕೆಂದು ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. ಈ ಆದೇಶವನ್ನು ಜಾರಿ ಮಾಡಲು ಪಶ್ಚಿಮ ಬಂಗಾಳದ ಅಲ್ಪಸಂಖ್ಯಾತ ವ್ಯವಹಾರ ಮತ್ತು ಮದರಸಾ ಶಿಕ್ಷಣ ಇಲಾಖೆ ಶೇ. 70 ಕ್ಕಿಂತ ಹೆಚ್ಚು ಮುಸ್ಲಿಂ ಮಕ್ಕಳು ಇರುವ ಶಾಲೆಗಳ ಪಟ್ಟಿಯನ್ನು ಸಿದ್ದಮಾಡಿದೆ ಎನ್ನಲಾಗಿದೆ.
ಈ ಆದೇಶವನ್ನು ಜಾರಿ ಮಾಡಲು ಪಶ್ಚಿಮ ಬಂಗಾಳದ ಅಲ್ಪಸಂಖ್ಯಾತ ವ್ಯವಹಾರ ಮತ್ತು ಮದರಸಾ ಶಿಕ್ಷಣ ಇಲಾಖೆ ಶೇ. 70ಕ್ಕಿಂತ ಹೆಚ್ಚು ಮುಸ್ಲಿಂ ಮಕ್ಕಳು ಇರುವ ಶಾಲೆಗಳ ಪಟ್ಟಿಯನ್ನು ಸಿದ್ಧ ಮಾಡಿದೆ ಎಂದು ಹೇಳಲಾಗಿದೆ. ಶಿಕ್ಷಣ ಸಂಸ್ಥೆಯಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶೇಕಡವಾರು ಪ್ರಮಾಣವನ್ನು ನಮೂದಿಸಿರುವ ಮಾಹಿತಿಯೊಂದಿಗೆ ಸರ್ಕಾರಿ ಮತ್ತು ಸರ್ಕಾರಿ ಅನಿದಾನಿತ ಶಾಲೆಗಳ ಪಟ್ಟಿಯನ್ನು ಸಂಗ್ರಹ ಮಾಡಲು ಜಿಲ್ಲಾ ಶಿಕ್ಷಣಾಧಿಕಾರಿಗೆ ಸುತ್ತೋಲೆ ಕಳುಹಿಸಲಾಗಿದೆ.
ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ಜಾರಿ ಆಗಿರುವ ಸುತ್ತೋಲೆಯ ಬಗ್ಗೆ ಗೊತ್ತಿಲ್ಲ. ಈ ಸಂಬಂಧ ತನಿಖೆ ಮಾಡಿಸಲಾಗುತ್ತಿದ್ದು, ಆದೇಶವನ್ನು ಹಿಂಪಡೆಯಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹೆಚ್ಚಿರುವ ಕಡೆಗಳಲ್ಲಿ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಲು ತಾಂತ್ರಿಕವಾಗಿ ಈ ರೀತಿಯ ಮಾಹಿತಿಯನ್ನು ಕೇಳಿರಬಹುದು. ಎಂದು ಹೇಳಿದ್ದಾರೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…