ಕೋಲ್ಕತ್ತಾ : ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮುಸ್ಲಿಂ ಮಕ್ಕಳಿಗೆ ಪ್ರತ್ಯೇಕ ಊಟದ ರೂಮ್ ನಿರ್ಮಿಸಲು ಸುತ್ತೋಲೆಯನ್ನು ಹೊರಡಿಸಿದ್ದು, ವಿವಾದಕ್ಕೆ ಕಾರಣವಾಗಿದೆ.
ಕೂಚ್ ಬಿಹಾರ್ ಜಿಲ್ಲೆಯ ಶಾಲೆಗಳಲ್ಲಿ ಶೇ.70 ಕ್ಕಿಂತ ಹೆಚ್ಚು ಮುಸ್ಲಿಂ ಮಕ್ಕಳೇ ಇದ್ದಾರೆ. ಇಲ್ಲಿ ಮಧ್ಯಾಹ್ನದ ಊಟಕ್ಕೆ ಪ್ರತ್ಯಕ ಊಟದ ಹಾಲ್ ಗಳನ್ನು ನಿರ್ಮಿಸಬೇಕೆಂದು ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. ಈ ಆದೇಶವನ್ನು ಜಾರಿ ಮಾಡಲು ಪಶ್ಚಿಮ ಬಂಗಾಳದ ಅಲ್ಪಸಂಖ್ಯಾತ ವ್ಯವಹಾರ ಮತ್ತು ಮದರಸಾ ಶಿಕ್ಷಣ ಇಲಾಖೆ ಶೇ. 70 ಕ್ಕಿಂತ ಹೆಚ್ಚು ಮುಸ್ಲಿಂ ಮಕ್ಕಳು ಇರುವ ಶಾಲೆಗಳ ಪಟ್ಟಿಯನ್ನು ಸಿದ್ದಮಾಡಿದೆ ಎನ್ನಲಾಗಿದೆ.
ಈ ಆದೇಶವನ್ನು ಜಾರಿ ಮಾಡಲು ಪಶ್ಚಿಮ ಬಂಗಾಳದ ಅಲ್ಪಸಂಖ್ಯಾತ ವ್ಯವಹಾರ ಮತ್ತು ಮದರಸಾ ಶಿಕ್ಷಣ ಇಲಾಖೆ ಶೇ. 70ಕ್ಕಿಂತ ಹೆಚ್ಚು ಮುಸ್ಲಿಂ ಮಕ್ಕಳು ಇರುವ ಶಾಲೆಗಳ ಪಟ್ಟಿಯನ್ನು ಸಿದ್ಧ ಮಾಡಿದೆ ಎಂದು ಹೇಳಲಾಗಿದೆ. ಶಿಕ್ಷಣ ಸಂಸ್ಥೆಯಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶೇಕಡವಾರು ಪ್ರಮಾಣವನ್ನು ನಮೂದಿಸಿರುವ ಮಾಹಿತಿಯೊಂದಿಗೆ ಸರ್ಕಾರಿ ಮತ್ತು ಸರ್ಕಾರಿ ಅನಿದಾನಿತ ಶಾಲೆಗಳ ಪಟ್ಟಿಯನ್ನು ಸಂಗ್ರಹ ಮಾಡಲು ಜಿಲ್ಲಾ ಶಿಕ್ಷಣಾಧಿಕಾರಿಗೆ ಸುತ್ತೋಲೆ ಕಳುಹಿಸಲಾಗಿದೆ.
ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ಜಾರಿ ಆಗಿರುವ ಸುತ್ತೋಲೆಯ ಬಗ್ಗೆ ಗೊತ್ತಿಲ್ಲ. ಈ ಸಂಬಂಧ ತನಿಖೆ ಮಾಡಿಸಲಾಗುತ್ತಿದ್ದು, ಆದೇಶವನ್ನು ಹಿಂಪಡೆಯಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹೆಚ್ಚಿರುವ ಕಡೆಗಳಲ್ಲಿ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಲು ತಾಂತ್ರಿಕವಾಗಿ ಈ ರೀತಿಯ ಮಾಹಿತಿಯನ್ನು ಕೇಳಿರಬಹುದು. ಎಂದು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…