Featured

ಪಶ್ಚಿಮ ಬಂಗಾಳದಲ್ಲಿ ವಾಸಿಸುವವರು ಬೆಂಗಾಲಿ ಮಾತನಾಡಲು ಕಲಿಯಲೇಬೇಕು : ಮಮತಾ ಬ್ಯಾನರ್ಜಿ -Vishwanews24

ಕೋಲ್ಕತಾ,: ಪಶ್ಚಿಮ ಬಂಗಾಳದಲ್ಲಿ ವಾಸಿಸುವವರು ಬೆಂಗಾಲಿ ಮಾತನಾಡಲು ಕಲಿಯಲೇಬೇಕು. ಬೆಂಗಾಲಿ ಭಾಷಿಕ ಜನರನ್ನು ಬೆಂಗಾಲಿಯೇತರರು ಗುರಿಯಾಗಿಸುವುದನ್ನು ಮುಂದುವರಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಅವರು ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಉತ್ತರ 24 ಪರಗಣ ಜಿಲ್ಲೆಯ ಕಂಚ್ರಪರದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಾವು ಬಂಗಾಳವನ್ನು ಮುಂದಕ್ಕೆ ತರಬೇಕಿದೆ. ನಾನು ಬಿಹಾರ, ಉತ್ತರ ಪ್ರದೇಶ, ಪಂಜಾಬ್‌ಗಳಿಗೆ ಹೋದಾಗ ಅವರ ಭಾಷೆಯನ್ನೇ ಮಾತನಾಡುತ್ತೇನೆ. ಯಾರಾದರೂ ಬಂಗಾಳದಲ್ಲಿ ವಾಸಿಸುತ್ತಿದ್ದರೆ, ಅವನು ಅಥವಾ ಅವಳು ಬೆಂಗಾಲಿ ಕಲಿಯಬೇಕು’ ಎಂದು ಹೇಳಿದರು.

‘ನಾನು ಬಿಹಾರದಲ್ಲಿ ಹಿಂದಿಯಲ್ಲಿ ಮಾತನಾಡುತ್ತೇನೆ. ಏಕೆಂದರೆ ಅದರ ಭಾಷೆ ಹಿಂದಿ. ತಮಿಳುನಾಡಿನಲ್ಲಿ ಮಾತ್ರವೇ ನಾನು ಕೆಲವು ಪದಗಳನ್ನು ತಮಿಳಿನಲ್ಲಿ ಮಾತನಾಡುತ್ತೇನೆ. ಏಕೆಂದರೆ ನನಗೆ ಆ ಭಾಷೆ ಬರುವುದಿಲ್ಲ. ನೀವು ಬಂಗಾಲದಲ್ಲಿ ವಾಸಿಸುವುದಾದರೆ ಬೆಂಗಾಲಿಯಲ್ಲಿ ಮಾತನಾಡಬೇಕು. ನೀವು ಬೇರೆ ಭಾಷೆ ಮಾತನಾಡಿದರೆ ನಮಗೇನೂ ಸಮಸ್ಯೆ ಇಲ್ಲ. ಆದರೆ ನೀವು ಬೆಂಗಾಲಿಯನ್ನೂ ಕಲಿಯಲೇಬೇಕು’ ಎಂದರು.

‘ಬಂಗಾಳದಲ್ಲಿ ಉಳಿದುಕೊಂಡು ಬೈಕ್‌ಗಳಲ್ಲಿ ಸುತ್ತಾಡುವ ಕ್ರಿಮಿನಲ್‌ಗಳನ್ನು ನಾನು ಸಹಿಸುವುದಿಲ್ಲ. ಅವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಬಂಗಾಳಿಯೇತರ ವ್ಯಕ್ತಿಗಳು ಬೆಂಗಾಲಿ ಮಾತನಾಡುವ ಜನರನ್ನು ಗುರಿಯಾಗಿರಿಸಿಕೊಂಡರೆ ಬಂಗಾಳದ ಜನರು ಸುಮ್ಮನೆ ಇರುತ್ತಾರೆಯೇ? ಮಹಾರಾಷ್ಟ್ರ ಮತ್ತು ಗುಜರಾತ್‌ನಿಂದ ಬಿಹಾರಿಗಳನ್ನು ಹೊರಹಾಕಿದಂತೆ ನಾವು ಜನರನ್ನು ಹೊರಹಾಕಲು ಬಯಸುವುದಿಲ್ಲ. ಆದರೆ, ಬಂಗಾಳದಲ್ಲಿ ವಾಸಿಸುತ್ತಾ, ಬಂಗಾಳಿಗಳನ್ನೇ ಬೆದರಿಸುವುದನ್ನು ಎಷ್ಟು ಕಾಲ ಎಂದು ಸಹಿಸಿಕೊಳ್ಳಲು ಸಾಧ್ಯ? ನಾನು ಇದನ್ನು ಸಹಿಸುವುದಿಲ್ಲ’ ಎಂದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago