ಕೋಲ್ಕತ್ತಾ,: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಆರಂಭವಾಗುತ್ತಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಬಿಜೆಪಿಮೊದಲ ಬಾರಿಗೆ ಬಂಗಾಳದ ಗದ್ದುಗೆ ಏರುತ್ತಿದೆ. ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸುವೇಂದು ಅಧಿಕಾರಿ ಇಂದು ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ನಂದಿಗ್ರಾಮದ ಹೋರಾಟದಿಂದ ಹಿಡಿದು ವಿಧಾನಸಭೆಯ ಅಂಗಳದವರೆಗೆ ಸುವೇಂದು ಅಧಿಕಾರಿ ನಡೆದು ಬಂದ ಹಾದಿ ಅತ್ಯಂತ ರೋಚಕವಾಗಿದೆ.
ಪಶ್ಚಿಮ ಬಂಗಾಳದ 293 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ.
ರವೀಂದ್ರನಾಥ ಠಾಗೋರ್ ಅವರ 165ನೇ ಜನ್ಮದಿನದಂದೇ ಸುವೇಂದು ಅಧಿಕಾರಿ ಅವರ ಪ್ರಮಾಣವಚನ ಸ್ವೀಕಾರ ನಡೆಯುತ್ತಿದೆ.
2021ರ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ನಂದಿಗ್ರಾಮದಲ್ಲಿ ಸೋಲಿಸಿದ್ದ ಸುವೇಂದು ಅಧಿಕಾರಿ, ಈಗ ರಾಜ್ಯದ ಸಿಎಂ ಆಗುತ್ತಿದ್ದಾರೆ.
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ
ಕೋಲ್ಕತ್ತಾದಲ್ಲಿ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಸುವೇಂದು ಅಧಿಕಾರಿಯನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಮಿತ್ ಶಾ ಅವರು ಅಧಿಕಾರಿ ಅವರಿಗೆ ಹೂಮಾಲೆ ಹಾಕಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ‘ಸುವೇಂದು ಅವರು ಸಂಘರ್ಷದ ಹಾದಿಯಲ್ಲಿ ಬಂದವರು. ಅವರಿಗೆ ಆಡಳಿತದ ಅನುಭವವಿದೆ. ಬಂಗಾಳದ ಜನತೆಯ ಆಸೆಗಳನ್ನು ಪೂರ್ಣಗೊಳಿಸಲು ಅವರು ಸಮರ್ಥರಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…