Featured

ಪಶ್ಚಿಮ ಬಂಗಾಳದ ವೈದ್ಯರ ಬೇಡಿಕೆಗಳನ್ನು 48 ಗಂಟೆಗಳಲ್ಲಿ ಈಡೇರಿಸಬೇಕು : ಮಮತಾಗೆ ಏಮ್ಸ್‌ ವೈದ್ಯರಿಂದ ಎಚ್ಚರಿಕೆ -Vishwanews24

ನವದೆಹಲಿ : ಪಶ್ಚಿಮ ಬಂಗಾಳದ ವೈದ್ಯರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ತೊಡಗಿದ್ದ ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದು ಸಿಎಂ ಮಮತಾ ಬ್ಯಾನರ್ಜಿಗೆ 48 ಗಂಟೆ ಕಾಲಾವಕಾಶ ನೀಡಿ ಬೇಡಿಕೆ ಪೂರೈಸಲು ನಿರ್ಧರಿಸಿದ್ದಾರೆ.

ಸಿಎಂ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ವೈದ್ಯರ ಬೇಡಿಕೆಗಳನ್ನು ಇನ್ನು 48 ಗಂಟೆಗಳಲ್ಲಿ ಈಡೇರಿಸಬೇಕು. ಇಲ್ಲದಿದ್ದರೆ ದೆಹಲಿ ಆಸ್ಪತ್ರೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹೂಡುವುದಾಗಿ ಏಮ್ಸ್ ನ ರೆಸಿಡೆಂಟ್ ವೈದ್ಯರ ಸಂಘ ಮಮತಾ ಬ್ಯಾನರ್ಜಿಗೆ ಎಚ್ಚರಿಕೆ ನೀಡಿದೆ.

ಆದರೆ ಮಮತಾ ಅವರ ಈ ಹೇಳಿಕೆಯ ಹೊರತಾಗಿಯೂ ಏಮ್ಸ್‌ನ ನಿವಾಸಿ ವೈದ್ಯರು “ಎಲ್ಲಕ್ಕಿಂತ ಮೊದಲು ಜೂನಿಯರ್‌ ವೈದ್ಯರ ಬೇಡಿಕೆಗಳನ್ನು ಪೂರೈಸಿ; ವೈದ್ಯ ಸಮುದಾಯದಲ್ಲಿ ಬೇಷರತ್‌ ಕ್ಷಮೆಯನ್ನು ಕೇಳಿ’ ಎಂದು ಪಟ್ಟು ಹಿಡಿದಿದ್ದಾರೆ.

ಮಮತಾ ಅವರನ್ನು ಭೇಟಿಯಾಗುವುದಕ್ಕೆ ಮುಷ್ಕರ ನಿರತ ವೈದ್ಯರು ನಿನ್ನೆ ಶುಕ್ರವಾರವೇ ನಿರಾಕರಿಸಿದ್ದರಲ್ಲದೆ “ಮಮತಾ ಬೇಷರತ್‌ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದ್ದರು.

ದೇಶಾದ್ಯಂತದ ವೈದ್ಯ ಸಮುದಾಯದ ಬೆಂಬಲದೊಂದಿಗೆ ವ್ಯಾಪಕವಾಗಿ ನಡೆಯುತ್ತಿರುವ ಮುಷ್ಕರವನ್ನು ಹಿಂಪಡೆಯಲು ಜೂನಿಯರ್‌ ವೈದ್ಯರು ಆರು ಶರತ್ತುಗಳನ್ನು ಪಶ್ಚಿಮ ಬಂಗಾಲ ಸರಕಾರಕ್ಕೆ ವಿಧಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago