Featured

ಪಶ್ಚಿಮ ಬಂಗಾಳದ ವೈದ್ಯರ ಬೇಡಿಕೆಗಳನ್ನು 48 ಗಂಟೆಗಳಲ್ಲಿ ಈಡೇರಿಸಬೇಕು : ಮಮತಾಗೆ ಏಮ್ಸ್‌ ವೈದ್ಯರಿಂದ ಎಚ್ಚರಿಕೆ -Vishwanews24

ನವದೆಹಲಿ : ಪಶ್ಚಿಮ ಬಂಗಾಳದ ವೈದ್ಯರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ತೊಡಗಿದ್ದ ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದು ಸಿಎಂ ಮಮತಾ ಬ್ಯಾನರ್ಜಿಗೆ 48 ಗಂಟೆ ಕಾಲಾವಕಾಶ ನೀಡಿ ಬೇಡಿಕೆ ಪೂರೈಸಲು ನಿರ್ಧರಿಸಿದ್ದಾರೆ.

ಸಿಎಂ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ವೈದ್ಯರ ಬೇಡಿಕೆಗಳನ್ನು ಇನ್ನು 48 ಗಂಟೆಗಳಲ್ಲಿ ಈಡೇರಿಸಬೇಕು. ಇಲ್ಲದಿದ್ದರೆ ದೆಹಲಿ ಆಸ್ಪತ್ರೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹೂಡುವುದಾಗಿ ಏಮ್ಸ್ ನ ರೆಸಿಡೆಂಟ್ ವೈದ್ಯರ ಸಂಘ ಮಮತಾ ಬ್ಯಾನರ್ಜಿಗೆ ಎಚ್ಚರಿಕೆ ನೀಡಿದೆ.

ಆದರೆ ಮಮತಾ ಅವರ ಈ ಹೇಳಿಕೆಯ ಹೊರತಾಗಿಯೂ ಏಮ್ಸ್‌ನ ನಿವಾಸಿ ವೈದ್ಯರು “ಎಲ್ಲಕ್ಕಿಂತ ಮೊದಲು ಜೂನಿಯರ್‌ ವೈದ್ಯರ ಬೇಡಿಕೆಗಳನ್ನು ಪೂರೈಸಿ; ವೈದ್ಯ ಸಮುದಾಯದಲ್ಲಿ ಬೇಷರತ್‌ ಕ್ಷಮೆಯನ್ನು ಕೇಳಿ’ ಎಂದು ಪಟ್ಟು ಹಿಡಿದಿದ್ದಾರೆ.

ಮಮತಾ ಅವರನ್ನು ಭೇಟಿಯಾಗುವುದಕ್ಕೆ ಮುಷ್ಕರ ನಿರತ ವೈದ್ಯರು ನಿನ್ನೆ ಶುಕ್ರವಾರವೇ ನಿರಾಕರಿಸಿದ್ದರಲ್ಲದೆ “ಮಮತಾ ಬೇಷರತ್‌ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದ್ದರು.

ದೇಶಾದ್ಯಂತದ ವೈದ್ಯ ಸಮುದಾಯದ ಬೆಂಬಲದೊಂದಿಗೆ ವ್ಯಾಪಕವಾಗಿ ನಡೆಯುತ್ತಿರುವ ಮುಷ್ಕರವನ್ನು ಹಿಂಪಡೆಯಲು ಜೂನಿಯರ್‌ ವೈದ್ಯರು ಆರು ಶರತ್ತುಗಳನ್ನು ಪಶ್ಚಿಮ ಬಂಗಾಲ ಸರಕಾರಕ್ಕೆ ವಿಧಿಸಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

7 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

10 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

10 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

11 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

11 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

11 hours ago