Featured

ಪಶ್ಚಿಮ ಬಂಗಾಳದ ವೈದ್ಯರ ಬೇಡಿಕೆಗಳನ್ನು 48 ಗಂಟೆಗಳಲ್ಲಿ ಈಡೇರಿಸಬೇಕು : ಮಮತಾಗೆ ಏಮ್ಸ್‌ ವೈದ್ಯರಿಂದ ಎಚ್ಚರಿಕೆ -Vishwanews24

ನವದೆಹಲಿ : ಪಶ್ಚಿಮ ಬಂಗಾಳದ ವೈದ್ಯರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ತೊಡಗಿದ್ದ ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದು ಸಿಎಂ ಮಮತಾ ಬ್ಯಾನರ್ಜಿಗೆ 48 ಗಂಟೆ ಕಾಲಾವಕಾಶ ನೀಡಿ ಬೇಡಿಕೆ ಪೂರೈಸಲು ನಿರ್ಧರಿಸಿದ್ದಾರೆ.

ಸಿಎಂ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ವೈದ್ಯರ ಬೇಡಿಕೆಗಳನ್ನು ಇನ್ನು 48 ಗಂಟೆಗಳಲ್ಲಿ ಈಡೇರಿಸಬೇಕು. ಇಲ್ಲದಿದ್ದರೆ ದೆಹಲಿ ಆಸ್ಪತ್ರೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹೂಡುವುದಾಗಿ ಏಮ್ಸ್ ನ ರೆಸಿಡೆಂಟ್ ವೈದ್ಯರ ಸಂಘ ಮಮತಾ ಬ್ಯಾನರ್ಜಿಗೆ ಎಚ್ಚರಿಕೆ ನೀಡಿದೆ.

ಆದರೆ ಮಮತಾ ಅವರ ಈ ಹೇಳಿಕೆಯ ಹೊರತಾಗಿಯೂ ಏಮ್ಸ್‌ನ ನಿವಾಸಿ ವೈದ್ಯರು “ಎಲ್ಲಕ್ಕಿಂತ ಮೊದಲು ಜೂನಿಯರ್‌ ವೈದ್ಯರ ಬೇಡಿಕೆಗಳನ್ನು ಪೂರೈಸಿ; ವೈದ್ಯ ಸಮುದಾಯದಲ್ಲಿ ಬೇಷರತ್‌ ಕ್ಷಮೆಯನ್ನು ಕೇಳಿ’ ಎಂದು ಪಟ್ಟು ಹಿಡಿದಿದ್ದಾರೆ.

ಮಮತಾ ಅವರನ್ನು ಭೇಟಿಯಾಗುವುದಕ್ಕೆ ಮುಷ್ಕರ ನಿರತ ವೈದ್ಯರು ನಿನ್ನೆ ಶುಕ್ರವಾರವೇ ನಿರಾಕರಿಸಿದ್ದರಲ್ಲದೆ “ಮಮತಾ ಬೇಷರತ್‌ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದ್ದರು.

ದೇಶಾದ್ಯಂತದ ವೈದ್ಯ ಸಮುದಾಯದ ಬೆಂಬಲದೊಂದಿಗೆ ವ್ಯಾಪಕವಾಗಿ ನಡೆಯುತ್ತಿರುವ ಮುಷ್ಕರವನ್ನು ಹಿಂಪಡೆಯಲು ಜೂನಿಯರ್‌ ವೈದ್ಯರು ಆರು ಶರತ್ತುಗಳನ್ನು ಪಶ್ಚಿಮ ಬಂಗಾಲ ಸರಕಾರಕ್ಕೆ ವಿಧಿಸಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

12 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

12 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

12 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

13 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

13 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

13 hours ago