ನವದೆಹಲಿ : ಪಶ್ಚಿಮ ಬಂಗಾಳದ ವೈದ್ಯರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ತೊಡಗಿದ್ದ ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದು ಸಿಎಂ ಮಮತಾ ಬ್ಯಾನರ್ಜಿಗೆ 48 ಗಂಟೆ ಕಾಲಾವಕಾಶ ನೀಡಿ ಬೇಡಿಕೆ ಪೂರೈಸಲು ನಿರ್ಧರಿಸಿದ್ದಾರೆ.
ಸಿಎಂ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ವೈದ್ಯರ ಬೇಡಿಕೆಗಳನ್ನು ಇನ್ನು 48 ಗಂಟೆಗಳಲ್ಲಿ ಈಡೇರಿಸಬೇಕು. ಇಲ್ಲದಿದ್ದರೆ ದೆಹಲಿ ಆಸ್ಪತ್ರೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹೂಡುವುದಾಗಿ ಏಮ್ಸ್ ನ ರೆಸಿಡೆಂಟ್ ವೈದ್ಯರ ಸಂಘ ಮಮತಾ ಬ್ಯಾನರ್ಜಿಗೆ ಎಚ್ಚರಿಕೆ ನೀಡಿದೆ.
ಆದರೆ ಮಮತಾ ಅವರ ಈ ಹೇಳಿಕೆಯ ಹೊರತಾಗಿಯೂ ಏಮ್ಸ್ನ ನಿವಾಸಿ ವೈದ್ಯರು “ಎಲ್ಲಕ್ಕಿಂತ ಮೊದಲು ಜೂನಿಯರ್ ವೈದ್ಯರ ಬೇಡಿಕೆಗಳನ್ನು ಪೂರೈಸಿ; ವೈದ್ಯ ಸಮುದಾಯದಲ್ಲಿ ಬೇಷರತ್ ಕ್ಷಮೆಯನ್ನು ಕೇಳಿ’ ಎಂದು ಪಟ್ಟು ಹಿಡಿದಿದ್ದಾರೆ.
ಮಮತಾ ಅವರನ್ನು ಭೇಟಿಯಾಗುವುದಕ್ಕೆ ಮುಷ್ಕರ ನಿರತ ವೈದ್ಯರು ನಿನ್ನೆ ಶುಕ್ರವಾರವೇ ನಿರಾಕರಿಸಿದ್ದರಲ್ಲದೆ “ಮಮತಾ ಬೇಷರತ್ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದ್ದರು.
ದೇಶಾದ್ಯಂತದ ವೈದ್ಯ ಸಮುದಾಯದ ಬೆಂಬಲದೊಂದಿಗೆ ವ್ಯಾಪಕವಾಗಿ ನಡೆಯುತ್ತಿರುವ ಮುಷ್ಕರವನ್ನು ಹಿಂಪಡೆಯಲು ಜೂನಿಯರ್ ವೈದ್ಯರು ಆರು ಶರತ್ತುಗಳನ್ನು ಪಶ್ಚಿಮ ಬಂಗಾಲ ಸರಕಾರಕ್ಕೆ ವಿಧಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…