ಬೆಂಗಳೂರು: ಪಹಲ್ಗಾಮ್ ಉಗ್ರರ ದಾಳಿ ವಿಚಾರದಲ್ಲಿ ಕೇಂದ್ರ ಸರ್ಕಾರದೊಂದಿಗೆ ನಿಲ್ಲುತ್ತೇವೆ, ರಾಜಕೀಯ ಮಾಡುವುದಿಲ್ಲ. ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ ಲಾಡ್ ಅವರ ಮುಖಂಡತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ ಎಂದು ಹೇಳಿದರು.
ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಇವುಗಳನ್ನು ಬುಡಸಮೇತ ಕಿತ್ತೊಗೆಯಬೇಕು. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದರು.
ಈ ಘಟನೆ ವಿದೇಶಾಂಗ ನೀತಿ, ಪ್ರವಾಸಿಗರು ಹಾಗೂ ದೇಶದ ಜನರ ಮೇಲೆ ಪ್ರಭಾವ ಬೀರುವುದರಿಂದ ಕೇಂದ್ರ ಸರ್ಕಾರ ಈ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು. ನಾನು ಈಗಷ್ಟೇ ದಾಳಿಯಲ್ಲಿ ಮೃತರ ಕುಟುಂಬದವರ ಜೊತೆ ಚರ್ಚೆ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದು, ಮೃತರ ಕುಟುಂಬಸ್ಥರನ್ನು ಭೇಟಿ ಮಾಡುವಂತೆ ತಿಳಿಸಿದ್ದೇನೆ ಎಂದು ಮಾಹಿತಿ ನೀಡಿದರು.
ಧರ್ಮದ ಆಧಾರದ ಮೇಲೆ ಹತ್ಯೆ ನಡೆಸಿರುವ ದಾಳಿಯನ್ನು ಇದೇ ಮೊದಲ ಬಾರಿಗೆ ನೋಡಿದ್ದೇನೆ. ನಮ್ಮ ಸಮಾಜ ಎತ್ತ ಸಾಗುತ್ತಿದೆ ಎಂದು ಆಘಾತವಾಗಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಂದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…