Featured

ಪಹಲ್ಗಾಮ್‌ ದಾಳಿ:  ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ – vishwanews24

ಪಹಲ್ಗಾಮ್‌ ದಾಳಿ:  ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಬುಧವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಇದೀಗ ಘಟನೆಯಲ್ಲಿ ಭಾಗಿಯಾದ ಮೂವರು ಉಗ್ರರ  ರೇಖಾಚಿತ್ರವನ್ನು ಭದ್ರತಾ ಸಂಸ್ಥೆ ಬಿಡುಗಡೆ ಮಾಡಿದೆ.

ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ. ಇದೀಗ ಪ್ರತ್ಯಕ್ಷದರ್ಶಿಗಳ ಮಾಹಿತಿಯ ಆಧಾರದ ಮೇಲೆ ಶಂಕಿತ ಭಯೋತ್ಪಾದಕರ ರೇಖಾಚಿತ್ರವನ್ನು ಬಿಡಿಸಲಾಗಿದೆ.

ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಈ ರೇಖಾಚಿತ್ರದಲ್ಲಿ ತೋರಿಸಲಾಗಿರುವ 3 ಶಂಕಿತ ಭಯೋತ್ಪಾದಕರ ಹೆಸರುಗಳು ಎಂದು ಎನ್‌ಐಎ ತಿಳಿಸಿದೆ.

ದಾಳಿಗೆ ಮುನ್ನ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗುತಾಣಗಳನ್ನು ನಿರ್ಮಿಸಿದ್ದರು. ಭಯೋತ್ಪಾದಕರು ಬಾಡಿ ಕ್ಯಾಮೆರಾಗಳನ್ನು ಧರಿಸಿದ್ದರು. ವಿಶೇಷವಾಗಿ ಹೆಲ್ಮೆಟ್ ಅಳವಡಿಸಿದ ಕ್ಯಾಮೆರಾಗಳನ್ನು ಧರಿಸಿ ಕೃತ್ಯವನ್ನು ಸಂಪೂರ್ಣವಾಗಿ ಚಿತ್ರೀಕರಿಸಿದ ವಿಚಾರ ತನಿಖೆಯಲ್ಲಿ ಗೊತ್ತಾಗಿದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago