ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಬುಧವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಇದೀಗ ಘಟನೆಯಲ್ಲಿ ಭಾಗಿಯಾದ ಮೂವರು ಉಗ್ರರ ರೇಖಾಚಿತ್ರವನ್ನು ಭದ್ರತಾ ಸಂಸ್ಥೆ ಬಿಡುಗಡೆ ಮಾಡಿದೆ.
ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ. ಇದೀಗ ಪ್ರತ್ಯಕ್ಷದರ್ಶಿಗಳ ಮಾಹಿತಿಯ ಆಧಾರದ ಮೇಲೆ ಶಂಕಿತ ಭಯೋತ್ಪಾದಕರ ರೇಖಾಚಿತ್ರವನ್ನು ಬಿಡಿಸಲಾಗಿದೆ.
ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಈ ರೇಖಾಚಿತ್ರದಲ್ಲಿ ತೋರಿಸಲಾಗಿರುವ 3 ಶಂಕಿತ ಭಯೋತ್ಪಾದಕರ ಹೆಸರುಗಳು ಎಂದು ಎನ್ಐಎ ತಿಳಿಸಿದೆ.
ದಾಳಿಗೆ ಮುನ್ನ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗುತಾಣಗಳನ್ನು ನಿರ್ಮಿಸಿದ್ದರು. ಭಯೋತ್ಪಾದಕರು ಬಾಡಿ ಕ್ಯಾಮೆರಾಗಳನ್ನು ಧರಿಸಿದ್ದರು. ವಿಶೇಷವಾಗಿ ಹೆಲ್ಮೆಟ್ ಅಳವಡಿಸಿದ ಕ್ಯಾಮೆರಾಗಳನ್ನು ಧರಿಸಿ ಕೃತ್ಯವನ್ನು ಸಂಪೂರ್ಣವಾಗಿ ಚಿತ್ರೀಕರಿಸಿದ ವಿಚಾರ ತನಿಖೆಯಲ್ಲಿ ಗೊತ್ತಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…