Featured

ಪಹಲ್ಗಾಮ್ ನ ಉಗ್ರರ ದಾಳಿ :  ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದಿಂದ ಸಕಲ ವ್ಯವಸ್ಥೆ : ಸಿದ್ದರಾಮಯ್ಯ – vishwanews24

ಪಹಲ್ಗಾಮ್ ನ ಉಗ್ರರ ದಾಳಿ :  ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದಿಂದ ಸಕಲ ವ್ಯವಸ್ಥೆ : ಸಿದ್ದರಾಮಯ್ಯ

ಬೆಂಗಳೂರು:ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.ಕನ್ನಡಿಗರನ್ನು ಕರೆತರಲು ಕಾರ್ಮಿಕ ಸಚಿವರಿಗೆ ಸೂಚನೆ. ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು..

ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು.

ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

8 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

8 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

9 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

9 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago