Featured

ಪಾಕಿಗಳ ವಿರುದ್ಧದ ಸರ್ಜಿಕಲ್ ದಾಳಿಗೆ ಇಂದಿಗೆ 2 ವರ್ಷ ಭರ್ತಿ..!

ನವದೆಹಲಿ: ಪಾಕಿಸ್ತಾನದ ಉಗ್ರರು ನಡೆಸಿದ್ದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ನಡೆಸಿದ್ದ ಸರ್ಜಿಕಲ್ ದಾಳಿಗೆ ಇಂದು ಎರಡು ವರ್ಷ ಪೂರ್ಣಗೊಂಡಿದೆ.

ಹೌದು, ಜಮ್ಮು ಮತ್ತು ಕಾಶ್ಮೀರದ ಉರಿ ಸೇನಾ ನೆಲೆ ಮೇಲೆ 2016ರ ಸೆಪ್ಟೆಂಬರ್ 18 ರಂದು ಪಾಕಿಸ್ತಾನದ ಉಗ್ರರು ದಾಳಿ ನಡೆಸಿ ಯೋಧರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಇದಕ್ಕೆ ಪ್ರತಿಕಾರವಾಗಿ ಭಾರತೀಯ ಸೇನೆ ಐತಿಹಾಸಿಕ ಸರ್ಜಿಕಲ್ ದಾಳಿ ನಡೆಸಿತ್ತು. ಈ ದಾಳಿಗೆ 2 ವರ್ಷದ ವರ್ಷಾಚರಣೆಯನ್ನು ಸೇನೆ ಅದ್ಧೂರಿಯಾಗಿ ನೆರವೇರಿಸಿದೆ.

ಭಾರತ ತನ್ನ ಸರ್ಜಿಕಲ್ ಸ್ಟ್ರೈಕ್ ಮುಖಾಂತರ ಇಡೀ ವಿಶ್ವಕ್ಕೆ ತನ್ನ ಸೇನೆಯ ಶಕ್ತಿ ಹಾಗೂ ಸಾಮರ್ಥ್ಯವನ್ನು ತೋರಿಸಿಕೊಟ್ಟಿತ್ತು. ಪಾಕಿಸ್ತಾನ ಆಶ್ರಯದಲ್ಲಿ ನಡೆಯುತ್ತಿದ್ದ ಉಗ್ರರಿಗೆ ಈ ದಾಳಿಯು ಬೆಚ್ಚಿ ಬೀಳುವಂತೆ ಮಾಡಿತ್ತು. ಅತ್ಯಂತ ಅಪಾಯಕಾರಿ ಕಾರ್ಯಾಚರಣೆಯನ್ನು ಸೇನೆ ಯಶಸ್ವಿಯಾಗಿ ನಡೆಸಿ, ಉಗ್ರರಿಗೆ ಸಿಂಹಸ್ವಪ್ನವಾಗಿ ಕಾಡಿತ್ತು.

 

ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಗೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಭಾರತೀಯ ಸೇನೆ ರಾಜಸ್ಥಾನದ ಜೋಧಪುರದಲ್ಲಿ `ಪರಾಕ್ರಮ ಪರ್ವ’ ಎಂಬ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿಯವರು ಅದ್ಧೂರಿಯಾಗಿ ಚಾಲನೆ ನೀಡಿ, ಸೇನಾ ನೆಲೆಯಾದ ಬ್ಯಾಟಲ್ ಆಕ್ಸ್ ಮೈದಾನದಲ್ಲಿ ಹುತಾತ್ಮ ಯೋಧರಿಗೆ ಗೌರವ ಸೂಚಿಸಿದ್ರು.

ಭಾರತೀಯ ಸೇನೆ ತನ್ನ 2 ನೇ ವರ್ಷದ ಸರ್ಜಿಕಲ್ ಸ್ಟ್ರೈಕ್ ಆಚರಣೆಯಲ್ಲಿದೆ. ಆದರೆ ಪಾಕ್ ಆಕ್ರಮಿತ ಕಾಶ್ಮೀರದ ಗಡಿಯಲ್ಲಿ 27 ಶಿಬಿರಗಳಲ್ಲಿರುವ 250 ಮಂದಿ ಉಗ್ರರು ಗಡಿ ನುಸುಳಲು ಯತ್ನಿಸ್ತಿದ್ದಾರೆ. ಭಾರತೀಯ ಯೋಧರು ನಡೆಸಿದ್ದ ಸರ್ಜಿಕಲ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನಿ ಉಗ್ರರು ಸಜ್ಜಾಗಿದ್ದಾರೆ ಎನ್ನುವ ಮಾಹಿತಿಯನ್ನು ಗುಪ್ತಚರ ಇಲಾಖೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ.

ಸರ್ಜಿಕಲ್ ಸ್ಟ್ರೈಕ್ ನಡೆದಿದ್ದು ಯಾಕೆ?
2016ರ ಸೆಪ್ಟೆಂಬರ್ 18 ರಂದು ಉಗ್ರರು ಜಮ್ಮು ಕಾಶ್ಮೀರದ ಉರಿಯಲ್ಲಿರುವ ಸೇನಾ ಕೇಂದ್ರ ಕಚೇರಿಗೆ ನುಗ್ಗಿ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 19 ಸೈನಿಕರು ಹುತಾತ್ಮರಾಗಿದ್ದರೆ 4 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಕಳೆದ ಎರಡು ದಶಕದಲ್ಲಿನ ಸೇನೆಯ ಮೇಲಿನ ಡೆಡ್ಲಿ ದಾಳಿ ಇದಾಗಿತ್ತು. ಈ ದಾಳಿಗೆ ಸೇಡು ತೀರಿಸಲು ಭಾರತೀಯ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು.

2016ರ ಸಪ್ಟೆಂಬರ್ 28, 29ರ ಮಧ್ಯರಾತ್ರಿ ವೇಳೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಪ್ರವೇಶಿಸಿ ಸರ್ಜಿಕಲ್ ದಾಳಿ ನಡೆಸಿ 20ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಿತ್ತು. ಈ ಕಾರ್ಯಾಚರಣೆ ಬಳಿಕ ಸುದ್ದಿಗೋಷ್ಠಿ ನಡೆಸಿ ಡಿಜಿಎಂಒ ಅಧಿಕಾರಿ ಕಾರ್ಯಾಚರಣೆಯ ವಿವರವನ್ನು ನೀಡಿದ್ದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

16 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

19 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

19 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

19 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

19 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

20 hours ago