ಅಂತಾರಾಷ್ಟ್ರೀಯ ನ್ಯೂಸ್

ಪಾಕಿಸ್ತಾನದಲ್ಲಿ ಭಾರೀ ಮಳೆ, ತೀವ್ರ ಹಿಮಪಾತ – ಭೂಕುಸಿತದಿಂದಾಗಿ ರಸ್ತೆಗಳು ಬಂದ್‌ ; 37 ಮಂದಿ ಸಾವು  – Vishwanews24

ಪಾಕಿಸ್ತಾನದಲ್ಲಿ ಭಾರೀ ಮಳೆ, ತೀವ್ರ ಹಿಮಪಾತ ; ಭೂಕುಸಿತದಿಂದಾಗಿ ರಸ್ತೆಗಳು ಬಂದ್‌ – 37 ಮಂದಿ ಸಾವು

ಪಾಕಿಸ್ತಾನ: ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ, ಅನೇಕ ಮನೆಗಳು ಕುಸಿದು ಕನಿಷ್ಠ 37 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 48 ಗಂಟೆಗಳಲ್ಲಿ ದೇಶಾದ್ಯಂತ ಭಾರೀ ಮಳೆಯಿಂದಾಗಿ ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಜನರು ಗಾಯಗೊಂಡಿದ್ದಾರೆ.

ಮಳೆಗೆ ಹಲವು ಮನೆಗಳು ಕುಸಿದಿದ್ದು, ಭೂಕುಸಿತದಿಂದ ರಸ್ತೆಗಳು ಬಂದ್‌ ಆಗಿವೆ. ಪಾಕಿಸ್ತಾನದಲ್ಲಿ ಭಾರೀ ಹಿಮಪಾತವಾದ ಸಮಯದಲ್ಲೇ ಇದು ಸಂಭವಿಸಿದೆ ಎಂದು ವರದಿಯಾಗಿದೆ.

ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹೇಳಿಕೆಯ ಪ್ರಕಾರ, ಗುರುವಾರ ರಾತ್ರಿಯಿಂದ, ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ವಿವಿಧ ಪ್ರದೇಶಗಳಲ್ಲಿ ಮಳೆಯಿಂದಾಗಿ ಸುಮಾರು 23 ಜನರು ಸಾವನ್ನಪ್ಪಿದ್ದಾರೆ. ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದ ಕರಾವಳಿ ನಗರವಾದ ಗ್ವಾದರ್‌ನಲ್ಲಿ ಪ್ರವಾಹದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ.

ಇನ್ನು ಬಜಾರ್, ಸ್ವಾತ್, ಲೋವರ್ ದಿರ್, ಮಲಕಂಡ್, ಖೈಬರ್, ಪೇಶಾವರ, ಉತ್ತರ, ದಕ್ಷಿಣ ವಜೀರಿಸ್ತಾನ್ ಮತ್ತು ಲಕ್ಕಿ ಮಾರ್ವತ್ ಸೇರಿದಂತೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಹತ್ತು ಜಿಲ್ಲೆಗಳಲ್ಲಿ ಕಳೆದ 48 ಗಂಟೆಗಳಲ್ಲಿ ಧಾರಾಕಾರ ಮಳೆಗೆ 37 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

18 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

19 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

20 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

21 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

21 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

21 hours ago