ಪಾಕಿಸ್ತಾನದಲ್ಲಿ ಭೀಕರ ಪ್ರವಾಹ : ಸಂತಾಪ ಸೂಚಿಸಿದ ರಾಹುಲ್ ಗಾಂಧಿ – Vishwanews24
ತೊಂದರೆಗೆ ಒಳಗಾದವರನ್ನು ನೆನೆದು ಅನುಕಂಪ ಮೂಡಿದೆ..
ದುರಂತದಿಂದ ಪ್ರಾಣ ಕಳೆದುಕೊಂಡವರಿಗೆ ಸಂತಾಪಗಳು..
ರಾಹುಲ್ ಗಾಂಧಿ ಟ್ವೀಟ್..
ಕನ್ಯಾಕುಮಾರಿ: ಪಾಕಿಸ್ತಾನದಲ್ಲಿ ಸಂಭವಿಸಿರುವ ಭೀಕರ ಪ್ರವಾಹಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ದುರಂತದಿಂದ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಏಜೆನ್ಸಿ ಪ್ರಕಾರ ಪಾಕಿಸ್ತಾನದಲ್ಲಿ ಸಂಭವಿಸಿರುವ ಭೀಕರ ಪ್ರವಾಹದಿಂದ ಜೂನ್ ತಿಂಗಳಿನಿಂದ ಇದುವರೆಗೆ 1,391 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 12,722 ಮಂದಿ ಗಾಯಗೊಂಡಿದ್ದಾರೆ. ಜೂನ್ ತಿಂಗಳ ಮಧ್ಯಭಾಗದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿತ್ತು. ನಂತರ ಹಲವೆಡೆ ಸರಣಿ ಪ್ರವಾಹಗಳು ಸಂಭವಿಸಿವೆ.
‘ಪಾಕಿಸ್ತಾನದಲ್ಲಿ ಸಂಭವಿಸಿರುವ ಪ್ರವಾಹ ಭೀಕರವಾಗಿದೆ. ತೊಂದರೆಗೆ ಒಳಗಾದವರನ್ನು ನೆನೆದು ಅನುಕಂಪ ಮೂಡಿದೆ. ದುರಂತದಿಂದ ಪ್ರಾಣ ಕಳೆದುಕೊಂಡವರಿಗೆ ಸಂತಾಪಗಳು’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
The floods in Pakistan are a terrible tragedy.
My heartfelt sympathies to all the people affected and deepest condolences to those who have lost their loved ones.
— Rahul Gandhi (@RahulGandhi) September 9, 2022
ದ.ಕ.ದಲ್ಲಿ ಮರಳುಗಾರಿಕೆ ನಿಷೇಧ : ಡಿಸಿ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್ – Vishwanews24
