Featured

ಪಾಕಿಸ್ತಾನದ ಆರ್ಥಿಕ ಸ್ಥಿತಿ ಭಾರತ ದೇಶಕ್ಕಿಂತ ಉತ್ತಮವಾಗಿದೆ : ಇಮ್ರಾನ್ ಖಾನ್ – Vishwanews24

ಪಾಕಿಸ್ತಾನದ ಆರ್ಥಿಕ ಸ್ಥಿತಿ ಭಾರತ ದೇಶಕ್ಕಿಂತ ಉತ್ತಮವಾಗಿದೆ : ಇಮ್ರಾನ್ ಖಾನ್ – Vishwanews24

ಇಸ್ಲಾಮಾಬಾದ್ : ಪಾಕಿಸ್ತಾನದ ಆರ್ಥಿಕ ಸ್ಥಿತಿ ಹಲವು ದೇಶಗಳಿಗೆ ಹೋಲಿಕೆ ಮಾಡಿದರೆ ವಿಶೇಷವಾಗಿ ಭಾರತ ದೇಶಕ್ಕಿಂತ ಉತ್ತಮವಾಗಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದರು.

ಇಸ್ಲಾಮಾಬಾದ್‌ನಲ್ಲಿ ಮಂಗಳವಾರ ನಡೆದ ಇಂಟರ್‌ನ್ಯಾಶನಲ್ ಚೇಂಬರ್ಸ್ ಶೃಂಗಸಭೆ 2022 ರ ಉದ್ಘಾಟನಾ ಅಧಿವೇಶನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ವಿಶ್ವದ ಹಲವು ದೇಶಗಳಿಗೆ ಹೋಲಿಸಿದರೆ ಜನ ಜೀವನ ನಡೆಸಲು ಪಾಕಿಸ್ತಾನ ಇನ್ನೂ ಅಗ್ಗದ ದೇಶಗಳಲ್ಲಿ ಒಂದಾಗಿದೆ. ಆದರೆ ಇತರ ಕೆಲವು ದೇಶದವರು ನಮ್ಮನ್ನು ವಿರೋಧಿಸಿ ಅಸಮರ್ಥರು ಎಂದು ಅಂದುಕೊಂಡಿದ್ದಾರೆ. ಆದರೆ ನಮ್ಮ ಸರ್ಕಾರವು ದೇಶವನ್ನು ಎಲ್ಲಾ ಬಿಕ್ಕಟ್ಟುಗಳಿಂದ ರಕ್ಷಣೆ ಮಾಡಿದೆ” ಎಂದು ಹೇಳಿದರು.

”ಇತರ ದೇಶಗಳಿಗಿಂತ ಪಾಕಿಸ್ತಾನದಲ್ಲಿ ತೈಲಗಳು ಕಡಿಮೆ ಬೆಲೆಗಳಿಗೆ ದೊರಕುತ್ತಿದ್ದು, ಇಂಟರ್ನ್ಯಾಷನಲ್ ಮಾನಿಟರಿ ಫಂಡ್ ಕೋರಿದ ಅವಶ್ಯಕತೆಗಳ ಭಾಗವಾಗಿ ಸಂಸತ್ತಿನಲ್ಲಿ ಹಣಕಾಸು ಮಸೂದೆಯನ್ನು ಮಂಡಿಸಿದ ಸಮಯದಲ್ಲಿ ಸರ್ಕಾರವು ಅನುಮೋದನೆ ನೀಡಿದರೆ, ಪಾಕಿಸ್ತಾನಕ್ಕೆ 1 ಶತಕೋಟಿ ಮೊತ್ತದ ಸಹಾಯ ದೊರಕಲಿದೆ” ಎಂದು ತಿಳಿದು ಬಂದಿದೆ.

ಈ ಮಸೂದೆಯ ಬಗ್ಗೆ ಮಂಗಳವಾರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಚರ್ಚಿಸಲಾಗಿದ್ದು, ಈ ಸಂದರ್ಭದಲ್ಲಿ ಪಾಕಿಸ್ತಾನ್ ಮುಸ್ಲಿಂ ಲೀಗ್ ನಾಯಕ ಮತ್ತು ನ್ಯಾಷನಲ್ ಅಸೆಂಬ್ಲಿಯ ವಿರೋಧ ಪಕ್ಷದ ನಾಯಕ ಶಹಬಾಜ್ ಷರೀಫ್ ಅವರು ಸರ್ಕಾರವು ಪಾಕಿಸ್ತಾನವನ್ನು ಕೇವಲ 1 ಬಿಲಿಯನ್ ಯುಎಸ್‌ಡಿಗಾಗಿ ಇರಿಸುತ್ತಿದೆ ಎಂದು ಆರೋಪಿಸಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago