ಮಂಗಳೂರು : ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಭೂಬಾಗಕ್ಕೆ ಪ್ರವೇಶಿಸಿ ದಾಳಿ ನಡೆಸಿ, ಉಗ್ರರನ್ನು ಸದೆ ಬಡಿದಿದ್ದು, ಈ ಹಿನ್ನಲೆಯಲ್ಲಿ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ಪ್ರತಿದಾಳಿ ನಡೆಸುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಕರಾವಳಿಯದ್ದಕ್ಕೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಪಾಕಿಸ್ತಾನ ಹಗೆ ತೀರಿಸಲು ಉಗ್ರರನ್ನು ಬಳಸಿ ಪ್ರತಿದಾಳಿ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆದ್ದರಿಂದ ಕರಾವಳಿಯಲ್ಲಿ ನೌಕ ದಳ, ಕೋಸ್ಟ್ ಗಾರ್ಡ್, ಕೋಸ್ಟಲ್ ಪೊಲೀಸರನ್ನು ಹೈ ಅಲರ್ಟ್ ಮಾಡಲಾಗಿದೆ.
ರಾಜ್ಯದ ಕರಾವಳಿ ಪ್ರದೇಶಗಳಾದ ಮಂಗಳೂರು, ಉಡುಪಿ, ಉತ್ತರಕನ್ನಡದ ಕಾರವಾರದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾರವಾರದ ಸೀಬರ್ಡ್ ಕದಂಬ ನೌಕಾನೆಲೆಯಲ್ಲೂ ಪ್ರಥಮ ಹಂತದ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಆಳಸಮುದ್ರದಲ್ಲಿ ನಡೆಯುವ ಚಟುವಟಿಕೆಗಳ ಹದ್ದಿನ ಕಣ್ಣಿಡಲಾಗುತ್ತಿದೆ.
ಸಮುದ್ರದಲ್ಲಿ ನೇವಿ, ಕೋಸ್ಟ್ ಗಾರ್ಡ್ ನಿಂದ ಕಟ್ಟೆಚ್ಚರ ವಹಿಸಲಾಗುತ್ತಿದ್ದ ಗಸ್ತು ಹೆಚ್ಚಿಸಲಾಗಿದೆ. ಸಮುದ್ರದಲ್ಲಿ ಗಸ್ತು ನಡೆಸಲು ಡಾರ್ನಿಯೆರ್ ವಿಮಾನ ಬಳಕೆ ಮಾಡಲಾಗುತ್ತಿದೆ.
ರಜೆಯಲ್ಲಿದ್ದ ನೌಕಾಸಿಬ್ಬಂದಿಗೆ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ರವಾನಿಸಲಾಗಿದೆ. ಕದಂಬ ನೌಕಾನೆಲೆ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಕಾರವಾರ ಕದಂಬ ನೌಕಾದಳದಿಂದ ಭಾರತ ಗಡಿಗೆ ಭದ್ರತೆಗೆ ನೌಕೆಗಳು ಈಗಾಗಲೇ ತೆರಳಿವೆ.
ಸಮುದ್ರದಲ್ಲಿ ಸಂಚರಿಸುವ ಬೋಟ್ ಗಳ ಮೇಲೂ ನಿಗಾ ಇರಿಸಲಾಗಿದ್ದು ಸಂಶಯಾಸ್ಪದ ಹಡಗು, ದೋಣಿಗಳು ಕಂಡು ಬಂದಲ್ಲಿ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…