ಮಂಗಳೂರು : ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಭೂಬಾಗಕ್ಕೆ ಪ್ರವೇಶಿಸಿ ದಾಳಿ ನಡೆಸಿ, ಉಗ್ರರನ್ನು ಸದೆ ಬಡಿದಿದ್ದು, ಈ ಹಿನ್ನಲೆಯಲ್ಲಿ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ಪ್ರತಿದಾಳಿ ನಡೆಸುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಕರಾವಳಿಯದ್ದಕ್ಕೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಪಾಕಿಸ್ತಾನ ಹಗೆ ತೀರಿಸಲು ಉಗ್ರರನ್ನು ಬಳಸಿ ಪ್ರತಿದಾಳಿ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆದ್ದರಿಂದ ಕರಾವಳಿಯಲ್ಲಿ ನೌಕ ದಳ, ಕೋಸ್ಟ್ ಗಾರ್ಡ್, ಕೋಸ್ಟಲ್ ಪೊಲೀಸರನ್ನು ಹೈ ಅಲರ್ಟ್ ಮಾಡಲಾಗಿದೆ.
ರಾಜ್ಯದ ಕರಾವಳಿ ಪ್ರದೇಶಗಳಾದ ಮಂಗಳೂರು, ಉಡುಪಿ, ಉತ್ತರಕನ್ನಡದ ಕಾರವಾರದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾರವಾರದ ಸೀಬರ್ಡ್ ಕದಂಬ ನೌಕಾನೆಲೆಯಲ್ಲೂ ಪ್ರಥಮ ಹಂತದ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಆಳಸಮುದ್ರದಲ್ಲಿ ನಡೆಯುವ ಚಟುವಟಿಕೆಗಳ ಹದ್ದಿನ ಕಣ್ಣಿಡಲಾಗುತ್ತಿದೆ.
ಸಮುದ್ರದಲ್ಲಿ ನೇವಿ, ಕೋಸ್ಟ್ ಗಾರ್ಡ್ ನಿಂದ ಕಟ್ಟೆಚ್ಚರ ವಹಿಸಲಾಗುತ್ತಿದ್ದ ಗಸ್ತು ಹೆಚ್ಚಿಸಲಾಗಿದೆ. ಸಮುದ್ರದಲ್ಲಿ ಗಸ್ತು ನಡೆಸಲು ಡಾರ್ನಿಯೆರ್ ವಿಮಾನ ಬಳಕೆ ಮಾಡಲಾಗುತ್ತಿದೆ.
ರಜೆಯಲ್ಲಿದ್ದ ನೌಕಾಸಿಬ್ಬಂದಿಗೆ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ರವಾನಿಸಲಾಗಿದೆ. ಕದಂಬ ನೌಕಾನೆಲೆ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಕಾರವಾರ ಕದಂಬ ನೌಕಾದಳದಿಂದ ಭಾರತ ಗಡಿಗೆ ಭದ್ರತೆಗೆ ನೌಕೆಗಳು ಈಗಾಗಲೇ ತೆರಳಿವೆ.
ಸಮುದ್ರದಲ್ಲಿ ಸಂಚರಿಸುವ ಬೋಟ್ ಗಳ ಮೇಲೂ ನಿಗಾ ಇರಿಸಲಾಗಿದ್ದು ಸಂಶಯಾಸ್ಪದ ಹಡಗು, ದೋಣಿಗಳು ಕಂಡು ಬಂದಲ್ಲಿ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…