ಇಸ್ಲಾಮಾಬಾದ್: ಪಾಕಿಸ್ತಾನದ ಬಳಿ ಇರುವ ಅಣು ಬಾಂಬ್’ಗಳ ಮೂಲಕ ಭಾರತದ ನಿರ್ದಿಷ್ಟ ನಗರವನ್ನು ಗುರಿಯನ್ನಾಗಿಸಿಟ್ಟುಕೊಂಡು ಧ್ವಂಸ ಮಾಡಬಹುದು ಎಂದು ಪಾಕ್ ರೈಲ್ವೆ ಸಚಿವ ಶೇಖ್ ರಶೀದ್ ಅಹ್ಮದ್ ಹೇಳಿದ್ದಾರೆ.
ನಮ್ಮ ಬಳಿ 125-250 ಗ್ರಾಂ ತೂಕದ ಅಣುಬಾಂಬ್ಗಳಿವೆ. ಇವನ್ನು ಪ್ರಯೋಗಿಸುವ ಮೂಲಕ ಭಾರತದ ನಿರ್ದಿಷ್ಟ ನಗರದಲ್ಲಿ ಇಚ್ಛಿಸಿದಷ್ಟು ಪ್ರಮಾಣದ ಹಾನಿಯನ್ನುಂಟು ಮಾಡಬಲ್ಲೆವು. ಪಾಕ್ ಮೇಲೆ ದಾಳಿ ಮಾಡುವ ದುಸ್ಸಾಹಸ ಮಾಡಿದರೆ, ಇಂತಹ ಅನಾಹುತಗಳನ್ನು ಎದುರಿಸುವ ಅನಿವಾರ್ಯತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸಿಲುಕಿಕೊಳ್ಳುತ್ತಾರೆ ಎಂದು ಹೇಳಿದರು.
ಕೆಲ ದಿನಗಳ ಹಿಂದಷ್ಟೇ ಶೇಖ್ ರಶೀದ್ ಅಹ್ಮದ್, ಅಕ್ಟೋಬರ್ ಅಥವಾ ಡಿಸೆಂಬರ್ನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಪೂರ್ಣ ಪ್ರಮಾಣದ ಯುದ್ಧವಾಗುವ ಸಾಧ್ಯತೆ ಹೆಚ್ಚಾಗಿದೆ. ಭಾರತವು ಪಾಕಿಸ್ತಾನದ ಜತೆಗೆ ಯುದ್ಧ ನಡೆಯದಂತೆ ತಡೆಯಬೇಕು. ಹಾಗೊಂದು ವೇಳೆ ಯುದ್ಧವಾದರೆ ಅಣ್ವಸ್ತ್ರ ಹೊಂದಿದ ಎರಡೂ ದೇಶಗಳ ಮಧ್ಯದ ಕೊನೆಯ ಯುದ್ಧ ಇದೇ ಆಗಲಿದೆ ಎಂದು ಹೇಳಿಕೆ ನೀಡಿದ್ದರು.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…