ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅಗತ್ಯವಿಲ್ಲ ; ಬಿಗಿ ಕ್ರಮದ ಅವಶ್ಯಕತೆ ಇದೆ : ಸಿದ್ದರಾಮಯ್ಯ – vishwanews24
ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅಗತ್ಯವಿಲ್ಲ ; ಬಿಗಿ ಕ್ರಮದ ಅವಶ್ಯಕತೆ ಇದೆ : ಸಿದ್ದರಾಮಯ್ಯ
ಮೈಸೂರು: ಪೆಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅಗತ್ಯವಿಲ್ಲ. ಆದರೆ ಬಿಗಿಯಾದ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭದ್ರತಾ ವೈಫಲ್ಯತೆ ಇದೆ ಎಂದು ನಾನು ಆರಂಭದಲ್ಲೇ ಹೇಳಿದ್ದೆ. ಈಗ ಕೇಂದ್ರ ಸರ್ಕಾರವೂ ಅದನ್ನು ಒಪ್ಪಿಕೊಂಡಿದೆ. ಅಲ್ಲಿಗೆ ನಾನು ಹೇಳಿದ್ದು ನಿಜವಾಗಿದೆ ಎಂದರು.
ಭದ್ರತಾ ವ್ಯವಸ್ಥೆಯನ್ನು ಬಿಗಿ ಮಾಡಬೇಕು. ನಾವು ಯುದ್ಧದ ಪರ ಇಲ್ಲ, ಶಾಂತಿ ವ್ಯವಸ್ಥೆ ಇರಬೇಕು. ಜನರಿಗೆ ಭದ್ರತೆ ಇರಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಜಮ್ಮು-ಕಾಶ್ಮೀರ ಪ್ರವಾಸಿ ಸ್ಥಳ. ಅಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕಿತ್ತು. ಪುಲ್ವಾಮಾ ದಾಳಿಯ ಬಳಿಕ ಎಚ್ಚರಿಕೆಯಿಂದ ಇರಬೇಕಿತ್ತು. ಗುಪ್ತಚರ ಹಾಗೂ ಭದ್ರತೆಯ ವೈಫಲ್ಯ ಎದ್ದುಕಾಣುತ್ತಿದೆ ಎಂದರು.
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ : ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24
ಪಾಕ್ ಪ್ರಜೆಗಳನ್ನು ವಾಪಸ್ ಕಳುಹಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಕೇಂದ್ರಕ್ಕೆ ಸಹಕಾರ ನೀಡುತ್ತೇವೆ. ಇಲ್ಲಿ ಯಾರೆಲ್ಲೆ ಪಾಕಿಸ್ತಾನದ ಪ್ರಜೆಗಳಿದ್ದಾರೋ ಅವರ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೊಡುತ್ತೇವೆ ಎಂದು ಹೇಳಿದ್ದಾರೆ.
