ಮೈಸೂರು: ಪೆಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅಗತ್ಯವಿಲ್ಲ. ಆದರೆ ಬಿಗಿಯಾದ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭದ್ರತಾ ವೈಫಲ್ಯತೆ ಇದೆ ಎಂದು ನಾನು ಆರಂಭದಲ್ಲೇ ಹೇಳಿದ್ದೆ. ಈಗ ಕೇಂದ್ರ ಸರ್ಕಾರವೂ ಅದನ್ನು ಒಪ್ಪಿಕೊಂಡಿದೆ. ಅಲ್ಲಿಗೆ ನಾನು ಹೇಳಿದ್ದು ನಿಜವಾಗಿದೆ ಎಂದರು.
ಭದ್ರತಾ ವ್ಯವಸ್ಥೆಯನ್ನು ಬಿಗಿ ಮಾಡಬೇಕು. ನಾವು ಯುದ್ಧದ ಪರ ಇಲ್ಲ, ಶಾಂತಿ ವ್ಯವಸ್ಥೆ ಇರಬೇಕು. ಜನರಿಗೆ ಭದ್ರತೆ ಇರಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಜಮ್ಮು-ಕಾಶ್ಮೀರ ಪ್ರವಾಸಿ ಸ್ಥಳ. ಅಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕಿತ್ತು. ಪುಲ್ವಾಮಾ ದಾಳಿಯ ಬಳಿಕ ಎಚ್ಚರಿಕೆಯಿಂದ ಇರಬೇಕಿತ್ತು. ಗುಪ್ತಚರ ಹಾಗೂ ಭದ್ರತೆಯ ವೈಫಲ್ಯ ಎದ್ದುಕಾಣುತ್ತಿದೆ ಎಂದರು.
ಪಾಕ್ ಪ್ರಜೆಗಳನ್ನು ವಾಪಸ್ ಕಳುಹಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಕೇಂದ್ರಕ್ಕೆ ಸಹಕಾರ ನೀಡುತ್ತೇವೆ. ಇಲ್ಲಿ ಯಾರೆಲ್ಲೆ ಪಾಕಿಸ್ತಾನದ ಪ್ರಜೆಗಳಿದ್ದಾರೋ ಅವರ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೊಡುತ್ತೇವೆ ಎಂದು ಹೇಳಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…