ಪಾಕಿಸ್ತಾನವು ವಿಶ್ವದ ಅತ್ಯಂತ ಸುರಕ್ಷಿತ ಸ್ಥಳಗಳಲ್ಲೊಂದಾಗಿದೆ : ಕ್ರಿಸ್‌ ಗೇಲ್‌ -Vishwanews24

ಢಾಕಾ: ‘ಪಾಕಿಸ್ತಾನವು ಸದ್ಯದ ಮಟ್ಟಿಗೆ ವಿಶ್ವದ ಅತ್ಯಂತ ಸುರಕ್ಷಿತ ಸ್ಥಳಗಳಲ್ಲೊಂದಾಗಿದೆ’ ಎಂದು ವೆಸ್ಟ್‌ ಇಂಡೀಸ್‌ ಕ್ರಿಕೆಟಿಗ ಕ್ರಿಸ್‌ ಗೇಲ್‌ ತಿಳಿಸಿದ್ದಾರೆ.

‘ಪಾಕಿಸ್ತಾನಕ್ಕೆ ಬರುವ ಆಟಗಾರರಿಗೆ ಬಿಗಿ ಭದ್ರತೆ ಒದಗಿಸಲು ಸಿದ್ಧವಿರುವುದಾಗಿ ಅಲ್ಲಿನ ಸರ್ಕಾರ ಹೇಳಿದೆ. ಹೀಗಾಗಿ ಆ ದೇಶಕ್ಕೆ ಹೋಗಿ ಕ್ರಿಕೆಟ್‌ ಆಡಲು ಭಯಪಡುವ ಅಗತ್ಯವಿಲ್ಲ. ಬಾಂಗ್ಲಾದೇಶದಲ್ಲೂ ನಿರ್ಭೀತಿಯಿಂದ ಕ್ರಿಕೆಟ್‌ ಆಡಬಹುದು’ ಎಂದಿದ್ದಾರೆ.

ಎಡಗೈ ಬ್ಯಾಟ್ಸ್‌ಮನ್‌ ಗೇಲ್‌, ಬಾಂಗ್ಲಾದೇಶ ಪ್ರೀಮಿಯರ್‌ ಲೀಗ್‌ನಲ್ಲಿ (ಬಿಪಿಎಲ್‌) ಚಟ್ಟೊಗ್ರಮ್‌ ಚಾಲೆಂಜರ್ಸ್‌ ತಂಡದ ಪರ ಆಡುತ್ತಿದ್ದಾರೆ.

2009ರಲ್ಲಿ ಲಾಹೋರ್‌ನ ಗಡಾಫಿ ಕ್ರೀಡಾಂಗಣದ ಬಳಿ ಶ್ರೀಲಂಕಾ ಆಟಗಾರರಿದ್ದ ಬಸ್‌ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಆ ಘಟನೆಯ ನಂತರ ಟೆಸ್ಟ್ ಆಡುವ ಎಲ್ಲಾ ರಾಷ್ಟ್ರಗಳೂ ಪಾಕಿಸ್ತಾನದಲ್ಲಿ ಕ್ರಿಕೆಟ್‌ ಸರಣಿ ಆಡಲು ಹಿಂದೇಟು ಹಾಕಿದ್ದವು.

ಹೋದ ವರ್ಷದ ಅಂತ್ಯದಲ್ಲಿ ಪಾಕಿಸ್ತಾನ ಪ್ರವಾಸ ಕೈಗೊಂಡಿದ್ದ ಶ್ರೀಲಂಕಾ ತಂಡ ಆತಿಥೇಯರ ವಿರುದ್ಧ ಏಕದಿನ, ಟ್ವೆಂಟಿ–20 ಮತ್ತು ಟೆಸ್ಟ್‌ ಸರಣಿಗಳನ್ನು ಆಡಿತ್ತು.

ಮೂರು ಪಂದ್ಯಗಳ ಟ್ವೆಂಟಿ–20 ಮತ್ತು ಎರಡು ಪಂದ್ಯಗಳ ಟೆಸ್ಟ್‌ ಸರಣಿಗಳನ್ನು ಆಡಲು ಪಾಕಿಸ್ತಾನಕ್ಕೆ ಬರುವಂತೆ ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯು (ಪಿಸಿಬಿ) ಈಗ ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿಗೆ (ಬಿಸಿಬಿ) ಆಹ್ವಾನ ನೀಡಿದೆ.

 

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

6 hours ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

7 hours ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

7 hours ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

7 hours ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

8 hours ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

8 hours ago