ಢಾಕಾ: ‘ಪಾಕಿಸ್ತಾನವು ಸದ್ಯದ ಮಟ್ಟಿಗೆ ವಿಶ್ವದ ಅತ್ಯಂತ ಸುರಕ್ಷಿತ ಸ್ಥಳಗಳಲ್ಲೊಂದಾಗಿದೆ’ ಎಂದು ವೆಸ್ಟ್ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ತಿಳಿಸಿದ್ದಾರೆ.
‘ಪಾಕಿಸ್ತಾನಕ್ಕೆ ಬರುವ ಆಟಗಾರರಿಗೆ ಬಿಗಿ ಭದ್ರತೆ ಒದಗಿಸಲು ಸಿದ್ಧವಿರುವುದಾಗಿ ಅಲ್ಲಿನ ಸರ್ಕಾರ ಹೇಳಿದೆ. ಹೀಗಾಗಿ ಆ ದೇಶಕ್ಕೆ ಹೋಗಿ ಕ್ರಿಕೆಟ್ ಆಡಲು ಭಯಪಡುವ ಅಗತ್ಯವಿಲ್ಲ. ಬಾಂಗ್ಲಾದೇಶದಲ್ಲೂ ನಿರ್ಭೀತಿಯಿಂದ ಕ್ರಿಕೆಟ್ ಆಡಬಹುದು’ ಎಂದಿದ್ದಾರೆ.
ಎಡಗೈ ಬ್ಯಾಟ್ಸ್ಮನ್ ಗೇಲ್, ಬಾಂಗ್ಲಾದೇಶ ಪ್ರೀಮಿಯರ್ ಲೀಗ್ನಲ್ಲಿ (ಬಿಪಿಎಲ್) ಚಟ್ಟೊಗ್ರಮ್ ಚಾಲೆಂಜರ್ಸ್ ತಂಡದ ಪರ ಆಡುತ್ತಿದ್ದಾರೆ.
2009ರಲ್ಲಿ ಲಾಹೋರ್ನ ಗಡಾಫಿ ಕ್ರೀಡಾಂಗಣದ ಬಳಿ ಶ್ರೀಲಂಕಾ ಆಟಗಾರರಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಆ ಘಟನೆಯ ನಂತರ ಟೆಸ್ಟ್ ಆಡುವ ಎಲ್ಲಾ ರಾಷ್ಟ್ರಗಳೂ ಪಾಕಿಸ್ತಾನದಲ್ಲಿ ಕ್ರಿಕೆಟ್ ಸರಣಿ ಆಡಲು ಹಿಂದೇಟು ಹಾಕಿದ್ದವು.
ಹೋದ ವರ್ಷದ ಅಂತ್ಯದಲ್ಲಿ ಪಾಕಿಸ್ತಾನ ಪ್ರವಾಸ ಕೈಗೊಂಡಿದ್ದ ಶ್ರೀಲಂಕಾ ತಂಡ ಆತಿಥೇಯರ ವಿರುದ್ಧ ಏಕದಿನ, ಟ್ವೆಂಟಿ–20 ಮತ್ತು ಟೆಸ್ಟ್ ಸರಣಿಗಳನ್ನು ಆಡಿತ್ತು.
ಮೂರು ಪಂದ್ಯಗಳ ಟ್ವೆಂಟಿ–20 ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಗಳನ್ನು ಆಡಲು ಪಾಕಿಸ್ತಾನಕ್ಕೆ ಬರುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು (ಪಿಸಿಬಿ) ಈಗ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ (ಬಿಸಿಬಿ) ಆಹ್ವಾನ ನೀಡಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…