Featured

ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಸ್ವತಂತ್ರ್ಯ ಕಾಶ್ಮೀರವನ್ನಾಗಿ ಘೋಷಣೆ ಮಾಡಿ :ಕಮಲ್ ಹಾಸನ್ – Vishwanews24

ಚೆನ್ನೈ: ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಸ್ವತಂತ್ರ್ಯ ಕಾಶ್ಮೀರವನ್ನಾಗಿ ಘೋಷಣೆ ಮಾಡಿ, ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಣೆ ಮಾಡಬೇಕು ಎಂದು ಖ್ಯಾತ ನಟ ಹಾಗೂ ಎಂಎನ್ಎಂ ಪಕ್ಷದ ಸಂಸ್ಛಾಪಕ ಕಮಲ್ ಹಾಸನ್ ಹೇಳಿದ್ದಾರೆ.
ಚೆನ್ನೈನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಕಮಲ್ ಹಾಸನ್ ಅವರು, ಭಾರತ ಮತ್ತು ಪಾಕಿಸ್ತಾನದ ರಾಜಕಾರಣಿಗಳು ಜವಾಬ್ದಾರಿತನದಿಂದ ವರ್ತಿಸಿದರೆ, ಖಂಡಿತಾ ಪುಲ್ವಾಮ ಉಗ್ರ ದಾಳಿಯಂತಹ ಘಟನೆಗಳು ನಡೆಯುವುದಿಲ್ಲ. ಗಡಿ ಪ್ರದೇಶದಲ್ಲಿ ಹಿಂಸಾಚಾರ ತಲೆ ಎತ್ತುವುದಿಲ್ಲ ಎಂದು ಹೇಳಿದರು.
ಆಜಾದ್ ಕಾಶ್ಮೀರದ ರೈಲುಗಳಲ್ಲಿ ಜಿಹಾದಿಗಳ ಫೋಟೊವನ್ನಿಟ್ಟು ಅವರನ್ನು ಹೀರೊಗಳಂತೆ ಮೆರೆಸುತ್ತಾರೆ. ಇದೊಂದು ಮೂರ್ಖತನದ ಕೆಲಸ. ಇತ್ತ ಭಾರತವೂ ಇಂಥದ್ದೇ ಮೂರ್ಖತನದ ಕೆಲಸ ಮಾಡುತ್ತದೆ. ಇದು ಸರಿಯಲ್ಲ, ಭಾರತ ಇದಕ್ಕಿಂತ ಉತ್ತಮ ದೇಶ ಎಂದು ಸಾಬೀತು ಮಾಡಬೇಕಾದರೆ ನಾವು ಈ ರೀತಿ ವರ್ತಿಸಬಾರದು. ಇಲ್ಲಿಯೇ ರಾಜಕೀಯ ಆರಂಭವಾಗುವುದು. ರಾಜಕೀಯದ ಹೊಸ ರೀತಿ ಆರಂಭವಾಗುವುದು ಎಂದಿದ್ದಾರೆ.
ನನ್ನ ಪ್ರಕಾರ ಕಣಿವೆ ರಾಜ್ಯದಲ್ಲಿ ಜನಾಭಿಪ್ರಾಯದ ಸಂಗ್ರಹಣ ಅನಿವಾರ್ಯವಾಗಿದೆ. ಅಲ್ಲಿನ ಜನರ ಆಶೋತ್ತರಗಳಿಗೆ ಕೇಂದ್ರ ಸರ್ಕಾರ ತುರ್ತಾಗಿ ಸ್ಪಂದಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗುವ ಸಾಧ್ಯತೆಗಳಿವೆ. ಪುಲ್ವಾಮ ಉಗ್ರ ದಾಳಿಯಲ್ಲಿ ಸೈನಿಕರ ಸಾವು ನಿಜಕ್ಕೂ ನನಗೆ ಅತೀವ ನೋವು ತಂದಿದೆ. ಸೈನಿಕರು ಕಾಶ್ಮೀರಕ್ಕೆ ಸಾಯಲೆಂದೇ ಹೋಗುತ್ತಾರೆಯೇ..? ಇದಕ್ಕೆ ಪರಿಹಾರವೇ ಇಲ್ಲವೇ.. ಸರ್ಕಾರವೇಕೆ ಅಲ್ಲಿನ ಜನಗಳ ಜನಾಭಿಪ್ರಾಯಕ್ಕೆ ಹಿಂದೇಟು ಹಾಕುತ್ತಿದೆ ಎಂಬುದು ತಮಗೆ ತಿಳಿಯುತ್ತಿಲ್ಲ ಎಂದು ಹೇಳಿದರು.
ಅಂತೆಯೇ ಗಡಿಯಲ್ಲಿ ಸೈನಿಕರು ಸತ್ತರೆ, ಉಭಯ ದೇಶಗಳ ರಾಜಕಾರಣಿಗಳು ಸಂಯಮದಿಂದ ವರ್ತಿಸಬೇಕು. ಅದನ್ನು ಬಿಟ್ಟು ಪ್ರಚೋಧನಾತ್ಮಕ ಹೇಳಿಕೆಗಳನ್ನು ನೀಡಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಬಾರದು. ಪಿಒಕೆಯನ್ನು ಸ್ವತಂತ್ರ್ಯ ಕಾಶ್ಮೀರವಾಗಿ ಘೋಷಣೆ ಮಾಡಿ ಭಾರತದ ಅವಿಭಾಜ್ಯ ಅಂಗವಾಗಿರುವ ಕಾಶ್ಮೀರದಲ್ಲಿ ಸರ್ಕಾರ ಜನಾಭಿಪ್ರಾಯ ಸಂಗ್ರಹಣೆಗೆ ಮುಂದಾಗಬೇಕು. ಅವರ ಆಶೋತ್ತರಗಳಿಗೆ ಸ್ಪಂದಿಸಿ ಹೊಸ ರಾಜಕೀಯ ವ್ಯವಸ್ಛೆ ಮತ್ತು ಹೊಸ ಸಂಸ್ಕೃತಿಯನ್ನು ಬೆಳಸಬೇಕು ಎಂದು ಹೇಳಿದರು.
Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

1 day ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

1 day ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

1 day ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

1 day ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

1 day ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

1 day ago